25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

ಕಣಿಯೂರು: ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ(46ವ)ರವರು ಸೆ.4ರಂದು ಅನಾರೋಗ್ಯದಿಂದ ನಿಧನರಾಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪದ್ಮುಂಜ ದರ್ಖಾಸು ಮನೆ ಉಮೇಶ್ ರವರ ದೂರಿನಂತೆ ಉಮೇಶ್ ರವರ ಅಣ್ಣ ಕುಶಾಲಪ್ಪ (46) ರವರು ಸುಮಾರು 02 ವರ್ಷಗಳಿಂದ ಬಿ.ಪಿ ಶುಗರ್, ಅಸ್ತಮ ಖಾಯಿಲೆಯಿಂದ ಬಳಲುತ್ತಿದ್ದು ಇತೀಚೆಗೆ ಕೆಲಸಕ್ಕೆ ಹೋಗದೇ ಕಣಿಯೂರು ಗ್ರಾಮದ ಪದ್ಮುಂಜ ದರ್ಖಾಸು ಮನೆಯಲ್ಲಿ ಇದ್ದು, ಸುಮಾರು 03 ದಿನಗಳಿಂದ ಊಟ ಮಾಡಲು ಆಗದೇ ವಾಂತಿ ಮಾಡಿಕೊಂಡು ಮನೆಯಲ್ಲಿ ಇದ್ದವನು ಸೆ. 04. ರಂದು ಕುಶಾಲಪ್ಪನು ವಿಪರೀತ ಸುಸ್ತು ಅಗಿ ಯಾವುದೇ ಮಾತುಗಳನ್ನು ಆಡದೇ ಇದ್ದವನನ್ನು ಉಮೇಶ್ ಮತ್ತು ಕುಶಾಲಪ್ಪರವರ ಹೆಂಡತಿ ಉಷಾ ಹಾಗೂ ನೆರೆಮನೆಯವರಾದ ಕೊರಗಪ್ಪ ಎಂಬವರು ಅಂಬ್ಯುಲೆನ್ಸ್ ವಾಹನದಲ್ಲಿ ಬೆಳ್ತಂಗಡಿ ಸರಕಾರಿ ಅಸ್ಷತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಕುಶಾಲಪ್ಪನು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ, ಕುಶಾಲಪ್ಪನು ಸರಿಯಾಗಿ ಆಹಾರ ಸೇವನೆ ಮಾಡದೇ ಅಥವಾ ಬೇರೆ ಯಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಯುಡಿಆರ್ ನಂಬ್ರ: 32/2024 ಕಲಂ: 194 BNSS. ಯಂತೆ ಪ್ರಕರಣ ದಾಖಲಾಗಿರುತ್ತದೆ

Related posts

ಪಡಿತರ ಚೀಟಿವಿಲ್ಲದೆ ವಂಚಿತಗೊಂಡಿದ್ದ ನೆರಿಯ ಗ್ರಾಮದ ಕೋಲೋಡಿ ನೀಲಮ್ಮ ಕುಟುಂಬಕ್ಕೆ ಲಭಿಸಿದ ರೇಷನ್ ಕಾರ್ಡ್

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

Suddi Udaya
error: Content is protected !!