July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಬಾರ ಮಂಡಳಿ (ಸ್ಪೈಸ್ ಬೋರ್ಡ್) ಮೂಡಿಗೆರೆ ವತಿಯಿಂದ ದ.ಕ.ಜಿಲ್ಲೆಯ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ಕುರಿತ ಒಂದು ದಿನದ ತರಬೇತಿ ಕಾರ್ಯಕ್ರಮವು ಸೆ.4 ರಂದು ನಡೆಯಿತು.

ತೋಟಗಾರಿಕೆ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಹರಿದಾಸ್ ಎಸ್. ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ಪ್ರಭಾರ ಜಂಟಿ ಕೃಷಿ ನಿರ್ದೇಶಕ ಶಿವಶಂಕರ್ ದಾನೆಗೊಂಡರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಾಂಬಾರ ಮಂಡಳಿಯ ಪ್ರಾದೇಶಿಕ ಕಚೇರಿ ಸಕಲೇಶಪುರ ಇಲ್ಲಿನ ಉಪ ನಿರ್ದೇಶಕ ಮಹಾಬಲೇಶ್ವರ ವೈ. ಹೊನ್ನೂರು ಇವರು ಭಾರತದಲ್ಲಿ ಸಾಂಬಾರ ಬೆಳೆಗಳ ರಫ್ತು ಮಾಡಲು ಇರುವ ಅವಕಾಶಗಳ ಕುರಿತು ವಿವರಿಸಿದರು. ಸಹಾಯಕ ಕೃಷಿ ನಿರ್ದೇಶಕರು ಬೆಳ್ತಂಗಡಿ ರಂಜಿತ್ ಕುಮಾರ್ ಟಿ.ಎಂ. ಇವರು ಕೃಷಿ ಇಲಾಖೆಯ ಪ್ರಮುಖ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಡಾ. ಹರ್ಷ ಕೆ ಎನ್, ವಿಜ್ಞಾನಿಗಳು, ಐಸಿಆರ್ ಐ, ದೋಣಿಗಲ್ ಸಕಲೇಶಪುರ ಇವರು ಕಾಳುಮೆಣಸಿನಲ್ಲಿ ಉತ್ತಮ ಕೃಷಿ ಪದ್ಧತಿಗಳು ಕುರಿತು ಮತ್ತು ಕುಮಾರ ಎಸ್, ಹಿರಿಯ ಕ್ಷೇತ್ರಾಧಿಕಾರಿ, ಸಾಂಬಾರ ಮಂಡಳಿಯ ಪ್ರಾದೇಶಿಕ ಕಚೇರಿ ಸಕಲೇಶಪುರ ಇವರು ಕಾಳುಮೆಣಸಿನ ನರ್ಸರಿ ವಿಧಾನಗಳ ಕುರಿತು ತರಬೇತಿಯನ್ನು ನೀಡಿದರು.

ಪ್ರಗತಿಪರ ಕೃಷಿಕ ಶ್ರೀ ಪ್ರಭಾಕರ ಮಯ್ಯ ಸುರ್ಯ ಇವರು ಕಾಳುಮೆಣಸಿನ ನಾಟಿ ಕುರಿತು ಪ್ರಾತ್ಯಕ್ಷಿಕೆ ಕೈಗೊಂಡರು. ಅಳದಂಗಡಿ ನಿವೃತ್ತ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸಂಜೀವ ನಾಯ್ಕ್ ಉಜಿರೆ, ನಿವೃತ್ತ ಸಹಾಯಕ ಕೃಷಿ ನಿರ್ದೇಶಕಿ ಶ್ರೀಮತಿ ಶೈಲಜಾ ಎ. ಎನ್, ಶ್ರೀಮತಿ ಸುಕನ್ಯಾ, ನಿರ್ದೇಶಕರು, ಅಳದಂಗಡಿ ಹೆಚ್.ಎಫ್.ಪಿ.ಸಿ ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟ ಉದ್ಘಾಟನೆ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

Suddi Udaya
error: Content is protected !!