25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

ಬೆಳಾಲು: ಬೆಳಾಲು ಗ್ರಾಮದ ಜಲಕ್ಕಾರು ನಿವಾಸಿ ಶೀನಪ್ಪ ಗೌಡ (65ವ) ರವರು ಬೆಳಾಲಿನ ಪೀನಾರಿ ಎಂಬಲ್ಲಿ ನಡೆದ ಬೈಕ್ ಅಪಘಾತದಲ್ಲಿ ಚಿಕಿತ್ಸೆ ಫಲಿಸದೆ ಸೆ.5ರಂದು ಸಾವನ್ನಪ್ಪಿದರು.

ಅವರು ಸೆ.4ರಂದು ಸಂಜೆ ಬೆಳಾಲಿನ ಹಾಲಿನ ಡೈರಿಗೆ ಹಾಲು ಹಾಕಿ ವಾಪಾಸು ಮನೆಗೆ ಬರುವ ವೇಳೆಗೆ ಪೀನಾರಿ ಎಂಬಲ್ಲಿ ಬೈಕ್ ಅಪಘಾತವಾಗಿ ಗಂಭೀರ ಗಾಯಗೊಂಡಿದ್ದರು. ಇವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ನಿಧನರಾದರು. ಇವರ ಬೈಕ್ ಸ್ಕಿಡ್ ಆಗಿ ಈ ಘಟನೆ ನಡೆಯಿತೊ, ಅಥವಾ ಬೊಲೇರೊ ಡಿಕ್ಕಿ ಹೊಡೆದು ಈ ಘಟನೆ ನಡೆಯಿತೊ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

Suddi Udaya

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಜಯೇಶ್ ಭೇಟಿ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಪಡಂಗಡಿ ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya
error: Content is protected !!