25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕೇಳ-ಬೊಟ್ಟ ಯಜ್ಞನಾರಾಯಣ ಭಟ್, ಇವರ ಪೌರೋಹಿತ್ಯದಲ್ಲಿ ಸೆ.7 ರಂದು ಪಲಾರಗೋಳಿ ಮೈದಾನದಲ್ಲಿ ನಡೆಯಲಿದೆ.

ಬೆಳಿಗ್ಗೆ ಮಹಾಗಣಪತಿ ದೇವರ ಪ್ರತಿಷ್ಠೆ, ಭಜನಾ ಕಾರ್ಯಕ್ರಮ, ಗಣಹೋಮ, ಸಾರ್ವಜನಿಕ ಅನ್ನಸಂತರ್ಪಣೆ, ಲಘು ಉಪಹಾರ, ಸಂಧ್ಯಾಪೂಜೆ, ಮಹಾಪೂಜೆ, ವೈಭವದ ವಿಗ್ರಹ ವಿಸರ್ಜನಾ ಮೆರವಣಿಗೆ ಮಧ್ಯಾಹ್ನ ಗಂಟೆ 2ರಿಂದ ಹಗ್ಗಜಗ್ಗಾಟ, ಪುರುಷರು ಮತ್ತು ಮಹಿಳೆಯರ ವಿಭಾಗ (ಮುಕ್ತ ವಿಭಾಗ), ಸಂಜೆ ಗಂಟೆ 4 ರಿಂದ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ ಗಂಟೆ 6.30ರಿಂದ “ಮುತ್ತು ಮನಿಪುಜೆ” ತುಳು ಹಾಸ್ಯಮಯ ನಾಟಕ ನಡೆಯಲಿದೆ.


ಸಂಜೆ ಗಂಟೆ 5.೦೦ಕ್ಕೆ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ರತ್ನಾಕರ ಬುಣ್ಣನ್ ಅಧ್ಯಕ್ಷರು, ಗ್ರಾ. ಪಂ., ಮರೋಡಿ, ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಯಂತ್ ಕೋಟ್ಯಾನ್ ಉಪಾಧ್ಯಕ್ಷರು, ಬಿಜೆಪಿ ದ.ಕ. ಜಿಲ್ಲೆ, ಟಿ.ಕೆ. ವೆಂಕಟರಾವ್ ನಿವೃತ್ತ ಅಧ್ಯಾಪಕರು, ಸುಮುಖ ಮರೋಡಿ, ರವೀಂದ್ರ ಅಂಚನ್ ಜಿಲ್ಲಾ ಮುಖ್ಯಸ್ಥರು, ಎಚ್‌ಡಿಎಫ್‌ಸಿ ಬ್ಯಾಂಕ್ ಉಡುಪಿ, ಶ್ರೀಮತಿ ಪದ್ಮಶ್ರೀ ಜೈನ್ ಮಾಜಿ ಅಧ್ಯಕ್ಷರು, ಗ್ರಾ. ಪಂ., ಮರೋಡಿ, ಉಮೇಶ್ ಸಾಲ್ಯಾನ್ ಸದಸ್ಯರು, ಗ್ರಾ.ಪಂ. ಮರೋಡಿ, ಶ್ರೀಮತಿ ಸುನಂದ ಸದಸ್ಯರು, ಗ್ರಾ.ಪಂ. ಮರೋಡಿ ಭಾಗವಹಿಸಲಿರುವರು.


Related posts

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya
error: Content is protected !!