25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮಿತ್ತಬಾಗಿಲು: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7 ರಂದು ಕೊಲ್ಲಿ ಶ್ರೀ ದುರ್ಗಾದೇವಿ ಕಲಾ ಮಂದಿರದಲ್ಲಿ ಜರುಗಲಿದೆ.

ಕಾರ್ಯಕ್ರಮಗಳು ಬೆಳಿಗ್ಗೆ 8.30ಕ್ಕೆ ಶ್ರೀ ವಿಘ್ನೇಶ್ವರ ಮೂರ್ತಿಯ ಪ್ರತಿಷ್ಠೆ, 10.00ಕ್ಕೆ ಗಣಹೋಮ, ಗಂಟೆ 11.೦೦ಕ್ಕೆ ‘ಕುಣಿತ ಭಜನಾ ಕಾರ್ಯಕ್ರಮ’ ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, 2.೦೦ರಿಂದ ಸಾರ್ವಜನಿಕರಿಗೆ ಮತ್ತು 1ರಿಂದ 10ನೇ ತರಗತಿಯ ಮಕ್ಕಳಿಗೆ ಆಟೋಟ ಸ್ಪರ್ಧೆ, ಅ. 3.30ರಿಂದ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಕೊಲ್ಲಿ ಇವರಿಂದ-ಭಜನಾ ಕಾರ್ಯಕ್ರಮ, ಸಂ. 5.೦೦ಕ್ಕೆ: ಓಂಕಾರ ಭಜನಾ ಮಂಡಳಿ, ಮಿತ್ತಬಾಗಿಲು ಸಂಜೆ 6.೦೦ಕ್ಕೆ ಮಹಿಳೆಯರಿಂದ ‘ಲಲಿತಾಸಹಸ್ರನಾಮ ವಾಚನ’, ರಾತ್ರಿ 7.೦೦ಕ್ಕೆ: ‘ಭಜನೆ’ – ಪಂಚಶ್ರೀ ಭಜನಾ ಮಂಡಳಿ, ಗಣೇಶನಗರ, ಮಿತ್ತಬಾಗಿಲು ಇವರಿಂದ, ರಾತ್ರಿ 8.೦೦ಕ್ಕೆ: ಮಹಾಪೂಜೆ, ಪ್ರಸಾದ ವಿತರಣೆ, ನೇತ್ರಾವತಿ ನದಿಯಲ್ಲಿ ಶ್ರೀ ಗಣೇಶನ ಮೂರ್ತಿ ವಿಸರ್ಜನೆ ನಡೆಯಲಿದೆ ಎಂದು ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಬನದಬಾಗಿಲು ತಿಳಿಸಿದ್ದಾರೆ.

Related posts

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

Suddi Udaya

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya
error: Content is protected !!