March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿಯಲ್ಲಿ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.೭ರಿಂದ ಸೆ.೧೧ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನ ಸಮಾಜ ಮಂದಿರ ರಸ್ತೆ, ಬೆಳ್ತಂಗಡಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಸೆ.7ರಂದು ಬೆಳಿಗ್ಗೆ ಮೂರ್ಜೆ ಶಿವಶಂಕರ ಪ್ರಭು ಇವರಿಂದ ಉದ್ಘಾಟನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸೆ.೮ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ೬.೩೦ರಿಂದ ಶಿರಡಿ ಶ್ರೀ ಸತ್ಯಸಾಯಿ ಕ್ಷೇತ್ರ ಹಳೆಕೋಟೆ ಇವರಿಂದ ಇವರಿಂದ ಭಜನೆ, ಸೆ.9 ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ 6ರಿಂದ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಿಡ್ಲೆ ಇವರಿಂದ ಪ್ರದರ್ಶನ ಭೃಗು ಲಾಂಛನ-ಶ್ರೀನಿವಾಸ ಕಲ್ಯಾಣ ಶಬರಾರ್ಜುನ ಯಕ್ಷಗಾನ ಪ್ರದರ್ಶನ, ಸೆ.10ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆಮ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 7ರಿಂದ ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ “ಕಲಾ ವೈಭವ”, ಸೆ.11ರಂದು ಬೆಳಿಗ್ಗೆ ಧಾರ್ಮಿಕ ಸಭೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಮಹಾಪೂಜೆ, ಪ್ರಸಾದ ವಿತರಣೆ ನಂತರ ವೈಭವ ಪೂರ್ಣ ಶೋಭಾಯಾತ್ರಯೊಂದಿಗೆ ಬೆಳ್ತಂಗಡಿಯ ಪುಣ್ಯನದಿಯಲ್ಲಿ ಶ್ರೀ ವಿಘ್ನೇಶ್ವರನ ವಿಗ್ರಹ ವಿಸರ್ಜನೆ ನಡೆಯಲಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya
error: Content is protected !!