ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಬಲಮುರಿ ಕ್ಷೇತ್ರ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ ಸೆ.9ರವರೆಗೆ ಲಾಯಿಲ ವಿಘ್ನೇಶ್ವರ ಕಲಾಮಂದಿರದಲ್ಲಿ ನಡೆಯಲಿದೆ.

ಸೆ.7ರಂದು ಬೆಳಿಗ್ಗೆ 108 ಕಾಯಿ ಗಣಪತಿ ಹವನ, ಪೂರ್ಣಾಹುತಿ, ಸಂಜೆ 5 ರಿಂದ ಶ್ರೀ ಶಾರದಾ ಅಂಧರ ಗೀತಗಾಯನ ಕಲಾ ಸಂಘ ಮಂಗಳೂರು ಇವರಿಂದ ಜನಪದ ಗೀತೆ ಹಾಗೂ ಭಕ್ತಿರಸಮಂಜರಿ, ರಾತ್ರಿ 8ರಿಂದ ಕರ್ನೋಡಿ ಮತ್ತು ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ, ಸೆ.8ರಂದು ಸಂಜೆ 6ರಿಂದ ಸಾಧನಾ ಕಲಾ ತಂಡ ಲಾಯಿಲ ಇವರಿಂದ “ಶ್ರೀ ಕೃಷ್ಣ ಪಾರಿಜಾತ ನರಕಾಸುರ ಮೋಕ್ಷ” ಯಕ್ಷಗಾನ, ರಾತ್ರಿ 9ರಿಂದ ಓಂ ಶಕ್ತಿ ಗೆಳೆಯರ ಬಳಗ ಲಾಯಿಲ ಇವರ ವತಿಯಿಂದ “ಬೈರಾಸ್ ಭಾಸ್ಕರೆ” ತುಳು ಹಾಸ್ಯಮಯ ನಾಟಕ ನಡೆಯಲಿದೆ.

ಸೆ.9ರಂದು ಮಧ್ಯಾಹ್ನ ಕರ್ನೋಡಿ, ಪಡ್ಲಾಡಿ, ಪುತ್ರಬೈಲು, ಹಂದೆವೂರು ಹಾಗೂ ಕನ್ನಾಜೆ ಅಂಗನವಾಡಿ ಮಕ್ಕಳಿಂದ ನೃತ್ಯ ಕಾರ್ಯಕ್ರಮ, ಸಂಜೆ ವಿವಿಧ ಭಜನಾ ತಂಡಗಳಿಂದ ಪ್ರತಿದಿನ ಭಜನಾ ಕಾರ್ಯಕ್ರಮ ಹಾಗೂ ಪ್ರತಿದಿನ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಎಂ.ಡಿ.ಎಂ.ಎ. ಮಾದಕ ವಸ್ತು ಮಾರಾಟ: ಆರೋಪಿ ಕೊಕ್ಕಡ ನಿವಾಸಿ ಯಹ್ಯಾ ಬಂಧನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಜಾರಿಗೆಬೈಲಿನಲ್ಲಿ ದ್ವಿಚಕ್ರ ವಾಹನ ಅಪಘಾತ

Suddi Udaya
error: Content is protected !!