April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

ಬೆಳ್ತಂಗಡಿ: ಉಪ ವಲಯ ಅರಣ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಉಪ್ಪಿನಂಗಡಿ ವಲಯದ ಪ್ರಶಾಂತ್ ಹಾಗೂ ಕು. ಕಮಲರವರು ಅರಣ್ಯ ರಕ್ಷಣೆ, ಒತ್ತುವರಿ ತೆರವು ಕಾರ್ಯಗಳಲ್ಲಿ ಅಮೋಘ ಸಾಧನೆ ಮಾಡಿರುವುದಕ್ಕೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದು ಇವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮುಖ್ಯಮಂತ್ರಿ ಪದಕವನ್ನು ಹಸ್ತಾಂತರಿಸಿ ಅಭಿನಂದಿಸಿ ಶುಭ ಹಾರೈಸಿದರು.

ಪ್ರಶಾಂತ್‌ರವರು ಬೈಂದೂರು ಗ್ರಾಮದ ಮರವಂತೆ ನಿವಾಸಿಯಾಗಿದ್ದು 2008ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯಕ್ಕೆ ಸೇರಿದ್ದರು. 2010ರಲ್ಲಿ ಅರಣ್ಯ ಇಲಾಖೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕಲಬುರ್ಗಿ ಜಿಲ್ಲೆಯ ಜೇವರ್ಗಿ ಸಾಮಾಜಿಕ ಅರಣ್ಯ ವಲಯಕ್ಕೆ ನೇಮಕಗೊಂಡು ನಂತರ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ವನ್ಯಜೀವಿ ನಿಲಯ, ಮೂಡಬಿದ್ರೆ ವಲಯದಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. 2015, ಡಿಸೆಂಬರ್‌ನಲ್ಲಿ ಉಪ್ಪಿನಂಗಡಿ ವಲಯದ ಕಳೆಂಜ ಶಾಖೆಗೆ ವರ್ಗಾವಣೆಗೊಂಡು ಸತತ 8 ವರ್ಷ ಕರ್ತವ್ಯ ನಿರ್ವಹಿಸಿ, 2024ರ ಜುಲೈ 11 ರಂದು ವರ್ಗಾವಣೆಗೊಂಡು ಪ್ರಸ್ತುತ ಮಂಗಳೂರು ಅರಣ್ಯ ಸಂಚಾರಿ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕು.ಕಮಲರವರು ಮೂಲತಃ ಉಜಿರೆ ನಿವಾಸಿ 2005ರಲ್ಲಿ ನೇರ ನೇಮಕಾತಿ ಮೂಲಕ ಬೆಳ್ತಂಗಡಿ ವಲಯದ ಅರಣ್ಯ ವೀಕ್ಷಕರಾಗಿ ನೇಮಕಗೊಂಡು ಬಳಿಕ ಅರಣ್ಯ ರಕ್ಷಕರಾಗಿ ಪದೋನ್ನತಿಗೊಂಡು ಬೆಳ್ತಂಗಡಿ ವಲಯದ ಚಿಬಿದ್ರಿ ತೋಟತ್ತಡಿ, ನೆರಿಯಾ, ಪುದುವೆಟ್ಟು ಇಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2020ರಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಪದೋನ್ನತಿ ಹೊಂದಿ ಉಪ್ಪಿನಂಗಡಿ ವಲಯದ ಶಿಬಾಜೆ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಅಲ್ಲಿಂದ ಮಂಗಳೂರಿನ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕಛೇರಿಗೆ ವರ್ಗಾವಣೆಗೊಂಡರು. ಪ್ರಸ್ತುತ ಕಮಲರವರು ವಿಶೇಷ ಕರ್ತವ್ಯ ನಿಮಿತ್ತ ಬೆಳ್ತಂಗಡಿ ವಲಯಕ್ಕೆ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related posts

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!