23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

ಬೆಳ್ತಂಗಡಿ: ಉಪ ವಲಯ ಅರಣ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಉಪ್ಪಿನಂಗಡಿ ವಲಯದ ಪ್ರಶಾಂತ್ ಹಾಗೂ ಕು. ಕಮಲರವರು ಅರಣ್ಯ ರಕ್ಷಣೆ, ಒತ್ತುವರಿ ತೆರವು ಕಾರ್ಯಗಳಲ್ಲಿ ಅಮೋಘ ಸಾಧನೆ ಮಾಡಿರುವುದಕ್ಕೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದು ಇವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮುಖ್ಯಮಂತ್ರಿ ಪದಕವನ್ನು ಹಸ್ತಾಂತರಿಸಿ ಅಭಿನಂದಿಸಿ ಶುಭ ಹಾರೈಸಿದರು.

ಪ್ರಶಾಂತ್‌ರವರು ಬೈಂದೂರು ಗ್ರಾಮದ ಮರವಂತೆ ನಿವಾಸಿಯಾಗಿದ್ದು 2008ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯಕ್ಕೆ ಸೇರಿದ್ದರು. 2010ರಲ್ಲಿ ಅರಣ್ಯ ಇಲಾಖೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕಲಬುರ್ಗಿ ಜಿಲ್ಲೆಯ ಜೇವರ್ಗಿ ಸಾಮಾಜಿಕ ಅರಣ್ಯ ವಲಯಕ್ಕೆ ನೇಮಕಗೊಂಡು ನಂತರ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ವನ್ಯಜೀವಿ ನಿಲಯ, ಮೂಡಬಿದ್ರೆ ವಲಯದಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. 2015, ಡಿಸೆಂಬರ್‌ನಲ್ಲಿ ಉಪ್ಪಿನಂಗಡಿ ವಲಯದ ಕಳೆಂಜ ಶಾಖೆಗೆ ವರ್ಗಾವಣೆಗೊಂಡು ಸತತ 8 ವರ್ಷ ಕರ್ತವ್ಯ ನಿರ್ವಹಿಸಿ, 2024ರ ಜುಲೈ 11 ರಂದು ವರ್ಗಾವಣೆಗೊಂಡು ಪ್ರಸ್ತುತ ಮಂಗಳೂರು ಅರಣ್ಯ ಸಂಚಾರಿ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕು.ಕಮಲರವರು ಮೂಲತಃ ಉಜಿರೆ ನಿವಾಸಿ 2005ರಲ್ಲಿ ನೇರ ನೇಮಕಾತಿ ಮೂಲಕ ಬೆಳ್ತಂಗಡಿ ವಲಯದ ಅರಣ್ಯ ವೀಕ್ಷಕರಾಗಿ ನೇಮಕಗೊಂಡು ಬಳಿಕ ಅರಣ್ಯ ರಕ್ಷಕರಾಗಿ ಪದೋನ್ನತಿಗೊಂಡು ಬೆಳ್ತಂಗಡಿ ವಲಯದ ಚಿಬಿದ್ರಿ ತೋಟತ್ತಡಿ, ನೆರಿಯಾ, ಪುದುವೆಟ್ಟು ಇಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2020ರಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಪದೋನ್ನತಿ ಹೊಂದಿ ಉಪ್ಪಿನಂಗಡಿ ವಲಯದ ಶಿಬಾಜೆ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಅಲ್ಲಿಂದ ಮಂಗಳೂರಿನ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕಛೇರಿಗೆ ವರ್ಗಾವಣೆಗೊಂಡರು. ಪ್ರಸ್ತುತ ಕಮಲರವರು ವಿಶೇಷ ಕರ್ತವ್ಯ ನಿಮಿತ್ತ ಬೆಳ್ತಂಗಡಿ ವಲಯಕ್ಕೆ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related posts

ಉಜಿರೆ: ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಯುವ ದಿನಾಚರಣೆ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಪೆರೋಡಿತ್ತಾಯಕಟ್ಟೆ: ಭಾರಿ ಗಾಳಿ ಮಳೆಗೆ ಮನೆಗೆ ಹಾನಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!