23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

ಬೆಳ್ತಂಗಡಿ: ಉಪ ವಲಯ ಅರಣ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಉಪ್ಪಿನಂಗಡಿ ವಲಯದ ಪ್ರಶಾಂತ್ ಹಾಗೂ ಕು. ಕಮಲರವರು ಅರಣ್ಯ ರಕ್ಷಣೆ, ಒತ್ತುವರಿ ತೆರವು ಕಾರ್ಯಗಳಲ್ಲಿ ಅಮೋಘ ಸಾಧನೆ ಮಾಡಿರುವುದಕ್ಕೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದು ಇವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮುಖ್ಯಮಂತ್ರಿ ಪದಕವನ್ನು ಹಸ್ತಾಂತರಿಸಿ ಅಭಿನಂದಿಸಿ ಶುಭ ಹಾರೈಸಿದರು.

ಪ್ರಶಾಂತ್‌ರವರು ಬೈಂದೂರು ಗ್ರಾಮದ ಮರವಂತೆ ನಿವಾಸಿಯಾಗಿದ್ದು 2008ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯಕ್ಕೆ ಸೇರಿದ್ದರು. 2010ರಲ್ಲಿ ಅರಣ್ಯ ಇಲಾಖೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕಲಬುರ್ಗಿ ಜಿಲ್ಲೆಯ ಜೇವರ್ಗಿ ಸಾಮಾಜಿಕ ಅರಣ್ಯ ವಲಯಕ್ಕೆ ನೇಮಕಗೊಂಡು ನಂತರ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ವನ್ಯಜೀವಿ ನಿಲಯ, ಮೂಡಬಿದ್ರೆ ವಲಯದಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. 2015, ಡಿಸೆಂಬರ್‌ನಲ್ಲಿ ಉಪ್ಪಿನಂಗಡಿ ವಲಯದ ಕಳೆಂಜ ಶಾಖೆಗೆ ವರ್ಗಾವಣೆಗೊಂಡು ಸತತ 8 ವರ್ಷ ಕರ್ತವ್ಯ ನಿರ್ವಹಿಸಿ, 2024ರ ಜುಲೈ 11 ರಂದು ವರ್ಗಾವಣೆಗೊಂಡು ಪ್ರಸ್ತುತ ಮಂಗಳೂರು ಅರಣ್ಯ ಸಂಚಾರಿ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕು.ಕಮಲರವರು ಮೂಲತಃ ಉಜಿರೆ ನಿವಾಸಿ 2005ರಲ್ಲಿ ನೇರ ನೇಮಕಾತಿ ಮೂಲಕ ಬೆಳ್ತಂಗಡಿ ವಲಯದ ಅರಣ್ಯ ವೀಕ್ಷಕರಾಗಿ ನೇಮಕಗೊಂಡು ಬಳಿಕ ಅರಣ್ಯ ರಕ್ಷಕರಾಗಿ ಪದೋನ್ನತಿಗೊಂಡು ಬೆಳ್ತಂಗಡಿ ವಲಯದ ಚಿಬಿದ್ರಿ ತೋಟತ್ತಡಿ, ನೆರಿಯಾ, ಪುದುವೆಟ್ಟು ಇಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2020ರಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಪದೋನ್ನತಿ ಹೊಂದಿ ಉಪ್ಪಿನಂಗಡಿ ವಲಯದ ಶಿಬಾಜೆ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಅಲ್ಲಿಂದ ಮಂಗಳೂರಿನ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕಛೇರಿಗೆ ವರ್ಗಾವಣೆಗೊಂಡರು. ಪ್ರಸ್ತುತ ಕಮಲರವರು ವಿಶೇಷ ಕರ್ತವ್ಯ ನಿಮಿತ್ತ ಬೆಳ್ತಂಗಡಿ ವಲಯಕ್ಕೆ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related posts

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಶೈಕ್ಷಣಿಕ ಸಾಧನೆ,ಅಭಿನಂದಿಸಿದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ : ರಾಷ್ಟ್ರಮಟ್ಟದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya
error: Content is protected !!