25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

ಕಳಿಯ : ಗ್ರಾಮ ಪಂಚಾಯಿತಿ ಕಳಿಯ ಮತ್ತು ಪಶುಸಂಗೋಪನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರವು ಸೆ. 5 ರಂದು ಕಳಿಯ ಗ್ರಾಮ ಪಂಚಾಯಿತಿ ವಠಾರದಲ್ಲಿ ಜರಗಿತು.


ಲಸಿಕ ಶಿಬಿರವನ್ನು ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷ ದಿವಾಕರ ಎಂ ಚಾಲನೆ ನೀಡಿ ಮಾತಾನಾಡಿ ರೇಬಿಸ್ ರೋಗದ ನಿರ್ಮೂಲನೆಗೆ ಪಂಚಾಯತ್ ಕಡೆಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆಂದು ಭರವಸೆ ನೀಡಿದರು.

ಈ ವೇಳೆ ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇದರ ಸಹಾಯಕ ನಿರ್ದೇಶಕರಾದ ಡಾ. ರವಿಕುಮಾರ್ ರವರು ಈ ಶಿಬಿರದ ಬಗ್ಗೆ ಮಾಹಿತಿ ನೀಡುತ್ತಾ ಕೇಂದ್ರ ಸರ್ಕಾರದ ಯೋಜನೆಯಂತೆ 2030 ಅವಧಿಗೆ ರೇಬಿಸ್ ರೋಗ ಸಂಪೂರ್ಣ ನಿರ್ಮೂಲನಾ ಬಹುದೊಡ್ಡ ಕನಸಾಗಿದ್ದು ಇದನ್ನು ನನಸುಗೊಳಿಸಬೇಕಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಅದ್ಯಕ್ಷರಾದ ಶ್ರೀಮತಿ ಸುಭಾಷಿಣಿ ಕೆ , ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಹಾಗೂ ಸ್ಥಳಿಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇಲ್ಲಿಯ ಸಿಬ್ಬಂದಿಗಳಾದ ರಂಗನಾಥ್ ಸಿ ಆರ್ ಮತ್ತು ಚಂದ್ರಕುಮಾರ್ , ಕಳಿಯ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ, ರವಿ ಹೆಚ್, ಸುರೇಶ್ ಕುಮಾರ್ ,ಸುಚಿತ್ರಾ, ಶಶಿಕಲಾ , ನಂದಿನಿ, ಮಾನಸ, ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಶುಸಖಿಯಾದ ಕೆ ರೂಪ ಸಹಕರಿಸಿದರು.

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೈದ್ಯರ 2 ತಂಡಗಳನ್ನು ರಚಿಸಿ ಸುಮಾರು 17 ಕ್ಕೂ ಹೆಚ್ಚಿನ ಕಡೆ ಸುಮಾರು 20೦ ಕ್ಕೂ ಹೆಚ್ಚು ಸಾಕು ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆಯನ್ನು ಉಚಿತವಾಗಿ ಹಾಕಿಸಿ ಕೊಂಡರು.

ಪಂಚಾಯತ್ ಕಾರ್ಯದರ್ಶಿಯವರಾದ ಕುಂಞ ಕೆ ಇವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಹಾಗೂ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 2 ನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!