ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

ಕಳಿಯ : ಗ್ರಾಮ ಪಂಚಾಯಿತಿ ಕಳಿಯ ಮತ್ತು ಪಶುಸಂಗೋಪನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರವು ಸೆ. 5 ರಂದು ಕಳಿಯ ಗ್ರಾಮ ಪಂಚಾಯಿತಿ ವಠಾರದಲ್ಲಿ ಜರಗಿತು.


ಲಸಿಕ ಶಿಬಿರವನ್ನು ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷ ದಿವಾಕರ ಎಂ ಚಾಲನೆ ನೀಡಿ ಮಾತಾನಾಡಿ ರೇಬಿಸ್ ರೋಗದ ನಿರ್ಮೂಲನೆಗೆ ಪಂಚಾಯತ್ ಕಡೆಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆಂದು ಭರವಸೆ ನೀಡಿದರು.

ಈ ವೇಳೆ ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇದರ ಸಹಾಯಕ ನಿರ್ದೇಶಕರಾದ ಡಾ. ರವಿಕುಮಾರ್ ರವರು ಈ ಶಿಬಿರದ ಬಗ್ಗೆ ಮಾಹಿತಿ ನೀಡುತ್ತಾ ಕೇಂದ್ರ ಸರ್ಕಾರದ ಯೋಜನೆಯಂತೆ 2030 ಅವಧಿಗೆ ರೇಬಿಸ್ ರೋಗ ಸಂಪೂರ್ಣ ನಿರ್ಮೂಲನಾ ಬಹುದೊಡ್ಡ ಕನಸಾಗಿದ್ದು ಇದನ್ನು ನನಸುಗೊಳಿಸಬೇಕಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಅದ್ಯಕ್ಷರಾದ ಶ್ರೀಮತಿ ಸುಭಾಷಿಣಿ ಕೆ , ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಹಾಗೂ ಸ್ಥಳಿಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇಲ್ಲಿಯ ಸಿಬ್ಬಂದಿಗಳಾದ ರಂಗನಾಥ್ ಸಿ ಆರ್ ಮತ್ತು ಚಂದ್ರಕುಮಾರ್ , ಕಳಿಯ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ, ರವಿ ಹೆಚ್, ಸುರೇಶ್ ಕುಮಾರ್ ,ಸುಚಿತ್ರಾ, ಶಶಿಕಲಾ , ನಂದಿನಿ, ಮಾನಸ, ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಶುಸಖಿಯಾದ ಕೆ ರೂಪ ಸಹಕರಿಸಿದರು.

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೈದ್ಯರ 2 ತಂಡಗಳನ್ನು ರಚಿಸಿ ಸುಮಾರು 17 ಕ್ಕೂ ಹೆಚ್ಚಿನ ಕಡೆ ಸುಮಾರು 20೦ ಕ್ಕೂ ಹೆಚ್ಚು ಸಾಕು ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆಯನ್ನು ಉಚಿತವಾಗಿ ಹಾಕಿಸಿ ಕೊಂಡರು.

ಪಂಚಾಯತ್ ಕಾರ್ಯದರ್ಶಿಯವರಾದ ಕುಂಞ ಕೆ ಇವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಲಾಯಿಲ :ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ

Suddi Udaya

ಪಾರೆಂಕಿ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ದೊಂಪದ ಬಲಿ ನೇಮೋತ್ಸವ

Suddi Udaya

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!