July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ನಡ: ಮಂಜೊಟ್ಟಿ ಪಣಿಕ್ಕಲ ನಿವಾಸಿಯಾದ ಧರ್ಣಪ್ಪ ಪೂಜಾರಿ(55 ವರ್ಷ) ಇವರು ಸೆ.4ರಂದು ಸಂಜೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಡ ಗ್ರಾಮದ ಪಣಿಕ್ಕಲ ನಿವಾಸಿ ಲಲಿತ ರವರ ದೂರಿನಂತೆ ಲಲಿತ ರವರ ಪತಿ ದರ್ಣಪ್ಪ ಪೂಜಾರಿ ರವರು ಮದುವೆಯಾಗಿ 28 ವರ್ಷಗಳಾಗಿದ್ದು ಮಕ್ಕಳಾಗಿರುವುದಿಲ್ಲ ಇದೇ ವಿಚಾರದಲ್ಲಿ ಲಲಿತ ಪತಿ ಧರ್ಣಪ್ಪ ಪೂಜಾರಿ ರವರು ಮಾನಸಿಕವಾಗಿ ಮನನೊಂದು ಮಾನಸಿಕ ಖಾಯಿಲೆಗೆ ತುತ್ತಾಗಿದ್ದವರು ಸುಮಾರು 10 ವರ್ಷಗಳಿಂದ ಮಾನಸಿಕ ತಜ್ಞರಿಂದ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದವರು ಸುಮಾರು 5 ತಿಂಗಳಿನಿಂದ ಯಾವುದೇ ಕೆಲಸಕ್ಕೂ ಹೋಗದೆ ಮನೆಯಲ್ಲಿಯೇ ಇದ್ದುದಾಗಿರುತ್ತದೆ. ಹೀಗಿರುವಾಗ ಸೆ.04 ರಂದು ಲಲಿತ ರವರು ಸಂಜೆ 4.30 ಗಂಟೆಗೆ ಮಂಜೊಟ್ಟಿ ಹಾಲಿನ ಡಿಪೊಗೆ ಹೋಗಿದ್ದು ಸಂಜೆ 5.30 ಗಂಟೆಗೆ ಮನೆಗೆ ವಾಪಾಸ್ಸು ಬಂದು ನೋಡಿದಾಗ ಲಲಿತ ಗಂಡ ಮನೆಯ ಛಾವಡಿಗೆ ಹಾಕಿದ ಮರದ ಅಡ್ಡಕ್ಕೆ ನೇಣು ಬಿಗಿದುಕೊಂಡಿರುವುದನ್ನು ಕಂಡು ನೆರೆ ಮನೆಯ ಲಲಿತ ರವರ ಅಣ್ಣ ಉಮೇಶ್ ಎಂಬಾತನನ್ನು ಬರಮಾಡಿಕೊಂಡು ಕುತ್ತಿಗೆಗೆ ಬಿಗಿದುಕೊಂಡಿದ್ದ ಬೈರಾಸ್ ನ್ನು ತುಂಡು ಮಾಡಿ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಲ್ಲಿ ಆಸ್ಪತ್ರೆಯ ವೈಧ್ಯಾಧಿಕಾರಿಯವರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅಪರಾದ 38/2024 ಕಲಂ: 194 ಬಿಎನ್ ಎಸ್ ಎಸ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya
error: Content is protected !!