23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ನಡ: ಮಂಜೊಟ್ಟಿ ಪಣಿಕ್ಕಲ ನಿವಾಸಿಯಾದ ಧರ್ಣಪ್ಪ ಪೂಜಾರಿ(55 ವರ್ಷ) ಇವರು ಸೆ.4ರಂದು ಸಂಜೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಡ ಗ್ರಾಮದ ಪಣಿಕ್ಕಲ ನಿವಾಸಿ ಲಲಿತ ರವರ ದೂರಿನಂತೆ ಲಲಿತ ರವರ ಪತಿ ದರ್ಣಪ್ಪ ಪೂಜಾರಿ ರವರು ಮದುವೆಯಾಗಿ 28 ವರ್ಷಗಳಾಗಿದ್ದು ಮಕ್ಕಳಾಗಿರುವುದಿಲ್ಲ ಇದೇ ವಿಚಾರದಲ್ಲಿ ಲಲಿತ ಪತಿ ಧರ್ಣಪ್ಪ ಪೂಜಾರಿ ರವರು ಮಾನಸಿಕವಾಗಿ ಮನನೊಂದು ಮಾನಸಿಕ ಖಾಯಿಲೆಗೆ ತುತ್ತಾಗಿದ್ದವರು ಸುಮಾರು 10 ವರ್ಷಗಳಿಂದ ಮಾನಸಿಕ ತಜ್ಞರಿಂದ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದವರು ಸುಮಾರು 5 ತಿಂಗಳಿನಿಂದ ಯಾವುದೇ ಕೆಲಸಕ್ಕೂ ಹೋಗದೆ ಮನೆಯಲ್ಲಿಯೇ ಇದ್ದುದಾಗಿರುತ್ತದೆ. ಹೀಗಿರುವಾಗ ಸೆ.04 ರಂದು ಲಲಿತ ರವರು ಸಂಜೆ 4.30 ಗಂಟೆಗೆ ಮಂಜೊಟ್ಟಿ ಹಾಲಿನ ಡಿಪೊಗೆ ಹೋಗಿದ್ದು ಸಂಜೆ 5.30 ಗಂಟೆಗೆ ಮನೆಗೆ ವಾಪಾಸ್ಸು ಬಂದು ನೋಡಿದಾಗ ಲಲಿತ ಗಂಡ ಮನೆಯ ಛಾವಡಿಗೆ ಹಾಕಿದ ಮರದ ಅಡ್ಡಕ್ಕೆ ನೇಣು ಬಿಗಿದುಕೊಂಡಿರುವುದನ್ನು ಕಂಡು ನೆರೆ ಮನೆಯ ಲಲಿತ ರವರ ಅಣ್ಣ ಉಮೇಶ್ ಎಂಬಾತನನ್ನು ಬರಮಾಡಿಕೊಂಡು ಕುತ್ತಿಗೆಗೆ ಬಿಗಿದುಕೊಂಡಿದ್ದ ಬೈರಾಸ್ ನ್ನು ತುಂಡು ಮಾಡಿ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಲ್ಲಿ ಆಸ್ಪತ್ರೆಯ ವೈಧ್ಯಾಧಿಕಾರಿಯವರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅಪರಾದ 38/2024 ಕಲಂ: 194 ಬಿಎನ್ ಎಸ್ ಎಸ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನ ದಿನಾಚರಣೆ

Suddi Udaya

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಜಿರೆಯ ಕೂಸಪ್ಪರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya

ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ಸಿದ್ದಕಟ್ಟೆ ಯಕ್ಷ ಮಿತ್ರ ಪ್ರಶಸ್ತಿ ಪ್ರದಾನ

Suddi Udaya
error: Content is protected !!