July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಜೋಸೆಫ್ (40 ವರ್ಷ) ರವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ನಡೆದಿದೆ.

ಇವರು ಆ 31ರಂದು ಮನೆಯಲ್ಲಿ ಹುಲ್ಲಿಗೆ ಸಿಂಪಡಿಸಲು ತಂದಿರಿಸಿದ್ದ ವಿಷವನ್ನು ತೆಗೆದು ಕುಡಿದ್ದು ಕೂಡಲೇ ಮನೆಯವರು ಆತನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ, ಸೆ.4 ರಂದು ಮೃತಪಟ್ಟಿದ್ದಾರೆ. ಮೃತ ಜೋಸೆಫ್ ಪತ್ನಿಯೊಂದಿಗೆ ಸದಾ ಜಗಳಾಡುತ್ತಿದ್ದ ಎನ್ನಲಾಗಿದ್ದು ಇದೇ ಕಾರಣಕ್ಕೆ ಆತನ ಪತ್ನಿ ಮಕ್ಕಳೊಂದಿಗೆ ಆ 28ರಂದು ಮನೆಯಿಂದ ತಾಯಿ ಮನೆಗೆ ಹೋಗಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿರಬಹುದು ಎಂದು ಅಂದಾಜಿಸಲಾಗಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ

Suddi Udaya

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

Suddi Udaya
error: Content is protected !!