April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

ಕಣಿಯೂರು: ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ(46ವ)ರವರು ಸೆ.4ರಂದು ಅನಾರೋಗ್ಯದಿಂದ ನಿಧನರಾಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪದ್ಮುಂಜ ದರ್ಖಾಸು ಮನೆ ಉಮೇಶ್ ರವರ ದೂರಿನಂತೆ ಉಮೇಶ್ ರವರ ಅಣ್ಣ ಕುಶಾಲಪ್ಪ (46) ರವರು ಸುಮಾರು 02 ವರ್ಷಗಳಿಂದ ಬಿ.ಪಿ ಶುಗರ್, ಅಸ್ತಮ ಖಾಯಿಲೆಯಿಂದ ಬಳಲುತ್ತಿದ್ದು ಇತೀಚೆಗೆ ಕೆಲಸಕ್ಕೆ ಹೋಗದೇ ಕಣಿಯೂರು ಗ್ರಾಮದ ಪದ್ಮುಂಜ ದರ್ಖಾಸು ಮನೆಯಲ್ಲಿ ಇದ್ದು, ಸುಮಾರು 03 ದಿನಗಳಿಂದ ಊಟ ಮಾಡಲು ಆಗದೇ ವಾಂತಿ ಮಾಡಿಕೊಂಡು ಮನೆಯಲ್ಲಿ ಇದ್ದವನು ಸೆ. 04. ರಂದು ಕುಶಾಲಪ್ಪನು ವಿಪರೀತ ಸುಸ್ತು ಅಗಿ ಯಾವುದೇ ಮಾತುಗಳನ್ನು ಆಡದೇ ಇದ್ದವನನ್ನು ಉಮೇಶ್ ಮತ್ತು ಕುಶಾಲಪ್ಪರವರ ಹೆಂಡತಿ ಉಷಾ ಹಾಗೂ ನೆರೆಮನೆಯವರಾದ ಕೊರಗಪ್ಪ ಎಂಬವರು ಅಂಬ್ಯುಲೆನ್ಸ್ ವಾಹನದಲ್ಲಿ ಬೆಳ್ತಂಗಡಿ ಸರಕಾರಿ ಅಸ್ಷತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಕುಶಾಲಪ್ಪನು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ, ಕುಶಾಲಪ್ಪನು ಸರಿಯಾಗಿ ಆಹಾರ ಸೇವನೆ ಮಾಡದೇ ಅಥವಾ ಬೇರೆ ಯಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಯುಡಿಆರ್ ನಂಬ್ರ: 32/2024 ಕಲಂ: 194 BNSS. ಯಂತೆ ಪ್ರಕರಣ ದಾಖಲಾಗಿರುತ್ತದೆ

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮ

Suddi Udaya

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya
error: Content is protected !!