37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಬಾರ ಮಂಡಳಿ (ಸ್ಪೈಸ್ ಬೋರ್ಡ್) ಮೂಡಿಗೆರೆ ವತಿಯಿಂದ ದ.ಕ.ಜಿಲ್ಲೆಯ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ಕುರಿತ ಒಂದು ದಿನದ ತರಬೇತಿ ಕಾರ್ಯಕ್ರಮವು ಸೆ.4 ರಂದು ನಡೆಯಿತು.

ತೋಟಗಾರಿಕೆ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಹರಿದಾಸ್ ಎಸ್. ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ಪ್ರಭಾರ ಜಂಟಿ ಕೃಷಿ ನಿರ್ದೇಶಕ ಶಿವಶಂಕರ್ ದಾನೆಗೊಂಡರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಾಂಬಾರ ಮಂಡಳಿಯ ಪ್ರಾದೇಶಿಕ ಕಚೇರಿ ಸಕಲೇಶಪುರ ಇಲ್ಲಿನ ಉಪ ನಿರ್ದೇಶಕ ಮಹಾಬಲೇಶ್ವರ ವೈ. ಹೊನ್ನೂರು ಇವರು ಭಾರತದಲ್ಲಿ ಸಾಂಬಾರ ಬೆಳೆಗಳ ರಫ್ತು ಮಾಡಲು ಇರುವ ಅವಕಾಶಗಳ ಕುರಿತು ವಿವರಿಸಿದರು. ಸಹಾಯಕ ಕೃಷಿ ನಿರ್ದೇಶಕರು ಬೆಳ್ತಂಗಡಿ ರಂಜಿತ್ ಕುಮಾರ್ ಟಿ.ಎಂ. ಇವರು ಕೃಷಿ ಇಲಾಖೆಯ ಪ್ರಮುಖ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಡಾ. ಹರ್ಷ ಕೆ ಎನ್, ವಿಜ್ಞಾನಿಗಳು, ಐಸಿಆರ್ ಐ, ದೋಣಿಗಲ್ ಸಕಲೇಶಪುರ ಇವರು ಕಾಳುಮೆಣಸಿನಲ್ಲಿ ಉತ್ತಮ ಕೃಷಿ ಪದ್ಧತಿಗಳು ಕುರಿತು ಮತ್ತು ಕುಮಾರ ಎಸ್, ಹಿರಿಯ ಕ್ಷೇತ್ರಾಧಿಕಾರಿ, ಸಾಂಬಾರ ಮಂಡಳಿಯ ಪ್ರಾದೇಶಿಕ ಕಚೇರಿ ಸಕಲೇಶಪುರ ಇವರು ಕಾಳುಮೆಣಸಿನ ನರ್ಸರಿ ವಿಧಾನಗಳ ಕುರಿತು ತರಬೇತಿಯನ್ನು ನೀಡಿದರು.

ಪ್ರಗತಿಪರ ಕೃಷಿಕ ಶ್ರೀ ಪ್ರಭಾಕರ ಮಯ್ಯ ಸುರ್ಯ ಇವರು ಕಾಳುಮೆಣಸಿನ ನಾಟಿ ಕುರಿತು ಪ್ರಾತ್ಯಕ್ಷಿಕೆ ಕೈಗೊಂಡರು. ಅಳದಂಗಡಿ ನಿವೃತ್ತ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸಂಜೀವ ನಾಯ್ಕ್ ಉಜಿರೆ, ನಿವೃತ್ತ ಸಹಾಯಕ ಕೃಷಿ ನಿರ್ದೇಶಕಿ ಶ್ರೀಮತಿ ಶೈಲಜಾ ಎ. ಎನ್, ಶ್ರೀಮತಿ ಸುಕನ್ಯಾ, ನಿರ್ದೇಶಕರು, ಅಳದಂಗಡಿ ಹೆಚ್.ಎಫ್.ಪಿ.ಸಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya
error: Content is protected !!