April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಬಾರ ಮಂಡಳಿ (ಸ್ಪೈಸ್ ಬೋರ್ಡ್) ಮೂಡಿಗೆರೆ ವತಿಯಿಂದ ದ.ಕ.ಜಿಲ್ಲೆಯ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ಕುರಿತ ಒಂದು ದಿನದ ತರಬೇತಿ ಕಾರ್ಯಕ್ರಮವು ಸೆ.4 ರಂದು ನಡೆಯಿತು.

ತೋಟಗಾರಿಕೆ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಹರಿದಾಸ್ ಎಸ್. ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ಪ್ರಭಾರ ಜಂಟಿ ಕೃಷಿ ನಿರ್ದೇಶಕ ಶಿವಶಂಕರ್ ದಾನೆಗೊಂಡರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಾಂಬಾರ ಮಂಡಳಿಯ ಪ್ರಾದೇಶಿಕ ಕಚೇರಿ ಸಕಲೇಶಪುರ ಇಲ್ಲಿನ ಉಪ ನಿರ್ದೇಶಕ ಮಹಾಬಲೇಶ್ವರ ವೈ. ಹೊನ್ನೂರು ಇವರು ಭಾರತದಲ್ಲಿ ಸಾಂಬಾರ ಬೆಳೆಗಳ ರಫ್ತು ಮಾಡಲು ಇರುವ ಅವಕಾಶಗಳ ಕುರಿತು ವಿವರಿಸಿದರು. ಸಹಾಯಕ ಕೃಷಿ ನಿರ್ದೇಶಕರು ಬೆಳ್ತಂಗಡಿ ರಂಜಿತ್ ಕುಮಾರ್ ಟಿ.ಎಂ. ಇವರು ಕೃಷಿ ಇಲಾಖೆಯ ಪ್ರಮುಖ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಡಾ. ಹರ್ಷ ಕೆ ಎನ್, ವಿಜ್ಞಾನಿಗಳು, ಐಸಿಆರ್ ಐ, ದೋಣಿಗಲ್ ಸಕಲೇಶಪುರ ಇವರು ಕಾಳುಮೆಣಸಿನಲ್ಲಿ ಉತ್ತಮ ಕೃಷಿ ಪದ್ಧತಿಗಳು ಕುರಿತು ಮತ್ತು ಕುಮಾರ ಎಸ್, ಹಿರಿಯ ಕ್ಷೇತ್ರಾಧಿಕಾರಿ, ಸಾಂಬಾರ ಮಂಡಳಿಯ ಪ್ರಾದೇಶಿಕ ಕಚೇರಿ ಸಕಲೇಶಪುರ ಇವರು ಕಾಳುಮೆಣಸಿನ ನರ್ಸರಿ ವಿಧಾನಗಳ ಕುರಿತು ತರಬೇತಿಯನ್ನು ನೀಡಿದರು.

ಪ್ರಗತಿಪರ ಕೃಷಿಕ ಶ್ರೀ ಪ್ರಭಾಕರ ಮಯ್ಯ ಸುರ್ಯ ಇವರು ಕಾಳುಮೆಣಸಿನ ನಾಟಿ ಕುರಿತು ಪ್ರಾತ್ಯಕ್ಷಿಕೆ ಕೈಗೊಂಡರು. ಅಳದಂಗಡಿ ನಿವೃತ್ತ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸಂಜೀವ ನಾಯ್ಕ್ ಉಜಿರೆ, ನಿವೃತ್ತ ಸಹಾಯಕ ಕೃಷಿ ನಿರ್ದೇಶಕಿ ಶ್ರೀಮತಿ ಶೈಲಜಾ ಎ. ಎನ್, ಶ್ರೀಮತಿ ಸುಕನ್ಯಾ, ನಿರ್ದೇಶಕರು, ಅಳದಂಗಡಿ ಹೆಚ್.ಎಫ್.ಪಿ.ಸಿ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya
error: Content is protected !!