ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಬಲಮುರಿ ಕ್ಷೇತ್ರ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ ಸೆ.9ರವರೆಗೆ ಲಾಯಿಲ ವಿಘ್ನೇಶ್ವರ ಕಲಾಮಂದಿರದಲ್ಲಿ ನಡೆಯಲಿದೆ.

ಸೆ.7ರಂದು ಬೆಳಿಗ್ಗೆ 108 ಕಾಯಿ ಗಣಪತಿ ಹವನ, ಪೂರ್ಣಾಹುತಿ, ಸಂಜೆ 5 ರಿಂದ ಶ್ರೀ ಶಾರದಾ ಅಂಧರ ಗೀತಗಾಯನ ಕಲಾ ಸಂಘ ಮಂಗಳೂರು ಇವರಿಂದ ಜನಪದ ಗೀತೆ ಹಾಗೂ ಭಕ್ತಿರಸಮಂಜರಿ, ರಾತ್ರಿ 8ರಿಂದ ಕರ್ನೋಡಿ ಮತ್ತು ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ, ಸೆ.8ರಂದು ಸಂಜೆ 6ರಿಂದ ಸಾಧನಾ ಕಲಾ ತಂಡ ಲಾಯಿಲ ಇವರಿಂದ “ಶ್ರೀ ಕೃಷ್ಣ ಪಾರಿಜಾತ ನರಕಾಸುರ ಮೋಕ್ಷ” ಯಕ್ಷಗಾನ, ರಾತ್ರಿ 9ರಿಂದ ಓಂ ಶಕ್ತಿ ಗೆಳೆಯರ ಬಳಗ ಲಾಯಿಲ ಇವರ ವತಿಯಿಂದ “ಬೈರಾಸ್ ಭಾಸ್ಕರೆ” ತುಳು ಹಾಸ್ಯಮಯ ನಾಟಕ ನಡೆಯಲಿದೆ.

ಸೆ.9ರಂದು ಮಧ್ಯಾಹ್ನ ಕರ್ನೋಡಿ, ಪಡ್ಲಾಡಿ, ಪುತ್ರಬೈಲು, ಹಂದೆವೂರು ಹಾಗೂ ಕನ್ನಾಜೆ ಅಂಗನವಾಡಿ ಮಕ್ಕಳಿಂದ ನೃತ್ಯ ಕಾರ್ಯಕ್ರಮ, ಸಂಜೆ ವಿವಿಧ ಭಜನಾ ತಂಡಗಳಿಂದ ಪ್ರತಿದಿನ ಭಜನಾ ಕಾರ್ಯಕ್ರಮ ಹಾಗೂ ಪ್ರತಿದಿನ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

Leave a Comment

error: Content is protected !!