July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಬಲಮುರಿ ಕ್ಷೇತ್ರ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ ಸೆ.9ರವರೆಗೆ ಲಾಯಿಲ ವಿಘ್ನೇಶ್ವರ ಕಲಾಮಂದಿರದಲ್ಲಿ ನಡೆಯಲಿದೆ.

ಸೆ.7ರಂದು ಬೆಳಿಗ್ಗೆ 108 ಕಾಯಿ ಗಣಪತಿ ಹವನ, ಪೂರ್ಣಾಹುತಿ, ಸಂಜೆ 5 ರಿಂದ ಶ್ರೀ ಶಾರದಾ ಅಂಧರ ಗೀತಗಾಯನ ಕಲಾ ಸಂಘ ಮಂಗಳೂರು ಇವರಿಂದ ಜನಪದ ಗೀತೆ ಹಾಗೂ ಭಕ್ತಿರಸಮಂಜರಿ, ರಾತ್ರಿ 8ರಿಂದ ಕರ್ನೋಡಿ ಮತ್ತು ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ, ಸೆ.8ರಂದು ಸಂಜೆ 6ರಿಂದ ಸಾಧನಾ ಕಲಾ ತಂಡ ಲಾಯಿಲ ಇವರಿಂದ “ಶ್ರೀ ಕೃಷ್ಣ ಪಾರಿಜಾತ ನರಕಾಸುರ ಮೋಕ್ಷ” ಯಕ್ಷಗಾನ, ರಾತ್ರಿ 9ರಿಂದ ಓಂ ಶಕ್ತಿ ಗೆಳೆಯರ ಬಳಗ ಲಾಯಿಲ ಇವರ ವತಿಯಿಂದ “ಬೈರಾಸ್ ಭಾಸ್ಕರೆ” ತುಳು ಹಾಸ್ಯಮಯ ನಾಟಕ ನಡೆಯಲಿದೆ.

ಸೆ.9ರಂದು ಮಧ್ಯಾಹ್ನ ಕರ್ನೋಡಿ, ಪಡ್ಲಾಡಿ, ಪುತ್ರಬೈಲು, ಹಂದೆವೂರು ಹಾಗೂ ಕನ್ನಾಜೆ ಅಂಗನವಾಡಿ ಮಕ್ಕಳಿಂದ ನೃತ್ಯ ಕಾರ್ಯಕ್ರಮ, ಸಂಜೆ ವಿವಿಧ ಭಜನಾ ತಂಡಗಳಿಂದ ಪ್ರತಿದಿನ ಭಜನಾ ಕಾರ್ಯಕ್ರಮ ಹಾಗೂ ಪ್ರತಿದಿನ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

Related posts

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ 12 ರಲ್ಲಿ 12 ಸ್ಥಾನ: ಬಿಜೆಪಿ ನಾಯಕ, ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ನೇತೃತ್ವದ ತಂಡ ಮತ್ತೊಮ್ಮೆ ಅಧಿಕಾರಕ್ಕೆ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಬೆಳ್ತಂಗಡಿಯಲ್ಲಿ ಪ್ರಸಾದ್‌ ಕೆ.ಎಸ್‌. ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya
error: Content is protected !!