ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಬಲಮುರಿ ಕ್ಷೇತ್ರ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ ಸೆ.9ರವರೆಗೆ ಲಾಯಿಲ ವಿಘ್ನೇಶ್ವರ ಕಲಾಮಂದಿರದಲ್ಲಿ ನಡೆಯಲಿದೆ.

ಸೆ.7ರಂದು ಬೆಳಿಗ್ಗೆ 108 ಕಾಯಿ ಗಣಪತಿ ಹವನ, ಪೂರ್ಣಾಹುತಿ, ಸಂಜೆ 5 ರಿಂದ ಶ್ರೀ ಶಾರದಾ ಅಂಧರ ಗೀತಗಾಯನ ಕಲಾ ಸಂಘ ಮಂಗಳೂರು ಇವರಿಂದ ಜನಪದ ಗೀತೆ ಹಾಗೂ ಭಕ್ತಿರಸಮಂಜರಿ, ರಾತ್ರಿ 8ರಿಂದ ಕರ್ನೋಡಿ ಮತ್ತು ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ, ಸೆ.8ರಂದು ಸಂಜೆ 6ರಿಂದ ಸಾಧನಾ ಕಲಾ ತಂಡ ಲಾಯಿಲ ಇವರಿಂದ “ಶ್ರೀ ಕೃಷ್ಣ ಪಾರಿಜಾತ ನರಕಾಸುರ ಮೋಕ್ಷ” ಯಕ್ಷಗಾನ, ರಾತ್ರಿ 9ರಿಂದ ಓಂ ಶಕ್ತಿ ಗೆಳೆಯರ ಬಳಗ ಲಾಯಿಲ ಇವರ ವತಿಯಿಂದ “ಬೈರಾಸ್ ಭಾಸ್ಕರೆ” ತುಳು ಹಾಸ್ಯಮಯ ನಾಟಕ ನಡೆಯಲಿದೆ.

ಸೆ.9ರಂದು ಮಧ್ಯಾಹ್ನ ಕರ್ನೋಡಿ, ಪಡ್ಲಾಡಿ, ಪುತ್ರಬೈಲು, ಹಂದೆವೂರು ಹಾಗೂ ಕನ್ನಾಜೆ ಅಂಗನವಾಡಿ ಮಕ್ಕಳಿಂದ ನೃತ್ಯ ಕಾರ್ಯಕ್ರಮ, ಸಂಜೆ ವಿವಿಧ ಭಜನಾ ತಂಡಗಳಿಂದ ಪ್ರತಿದಿನ ಭಜನಾ ಕಾರ್ಯಕ್ರಮ ಹಾಗೂ ಪ್ರತಿದಿನ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

Related posts

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya
error: Content is protected !!