23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಬಲಮುರಿ ಕ್ಷೇತ್ರ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ ಸೆ.9ರವರೆಗೆ ಲಾಯಿಲ ವಿಘ್ನೇಶ್ವರ ಕಲಾಮಂದಿರದಲ್ಲಿ ನಡೆಯಲಿದೆ.

ಸೆ.7ರಂದು ಬೆಳಿಗ್ಗೆ 108 ಕಾಯಿ ಗಣಪತಿ ಹವನ, ಪೂರ್ಣಾಹುತಿ, ಸಂಜೆ 5 ರಿಂದ ಶ್ರೀ ಶಾರದಾ ಅಂಧರ ಗೀತಗಾಯನ ಕಲಾ ಸಂಘ ಮಂಗಳೂರು ಇವರಿಂದ ಜನಪದ ಗೀತೆ ಹಾಗೂ ಭಕ್ತಿರಸಮಂಜರಿ, ರಾತ್ರಿ 8ರಿಂದ ಕರ್ನೋಡಿ ಮತ್ತು ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ, ಸೆ.8ರಂದು ಸಂಜೆ 6ರಿಂದ ಸಾಧನಾ ಕಲಾ ತಂಡ ಲಾಯಿಲ ಇವರಿಂದ “ಶ್ರೀ ಕೃಷ್ಣ ಪಾರಿಜಾತ ನರಕಾಸುರ ಮೋಕ್ಷ” ಯಕ್ಷಗಾನ, ರಾತ್ರಿ 9ರಿಂದ ಓಂ ಶಕ್ತಿ ಗೆಳೆಯರ ಬಳಗ ಲಾಯಿಲ ಇವರ ವತಿಯಿಂದ “ಬೈರಾಸ್ ಭಾಸ್ಕರೆ” ತುಳು ಹಾಸ್ಯಮಯ ನಾಟಕ ನಡೆಯಲಿದೆ.

ಸೆ.9ರಂದು ಮಧ್ಯಾಹ್ನ ಕರ್ನೋಡಿ, ಪಡ್ಲಾಡಿ, ಪುತ್ರಬೈಲು, ಹಂದೆವೂರು ಹಾಗೂ ಕನ್ನಾಜೆ ಅಂಗನವಾಡಿ ಮಕ್ಕಳಿಂದ ನೃತ್ಯ ಕಾರ್ಯಕ್ರಮ, ಸಂಜೆ ವಿವಿಧ ಭಜನಾ ತಂಡಗಳಿಂದ ಪ್ರತಿದಿನ ಭಜನಾ ಕಾರ್ಯಕ್ರಮ ಹಾಗೂ ಪ್ರತಿದಿನ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

Related posts

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya
error: Content is protected !!