July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ.) ದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ವಹಿಸಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿ ಬಾಯಿ ಪುಲೆ ಅವರುಗಳ ಕೊಡುಗೆಯನ್ನು ಸ್ಮರಿಸುತ್ತಾ, ಶಿಕ್ಷಕರು ಸಮಯ ಬದ್ಧತೆ, ವಿಷಯ ಬದ್ಧತೆ, ಭಾಷಾ ಬದ್ಧತೆ ಹಾಗೂ ಶಾಲಾ ಬದ್ಧತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.


ಉಪನ್ಯಾಸಕರಾದ ಶ್ರೀಮತಿ ಅನುಷಾ ಡಿ. ಜೆ ಹಾಗೂ ಪ್ರಶಿಕ್ಷಣಾರ್ಥಿ ದೀಕ್ಷಿತ್ ಶಿಕ್ಷಕರ ದಿನದ ವಿಶೇಷದ ಕುರಿತು ಮಾತನಾಡಿದರು. ಶಿಕ್ಷಕರ ಕುರಿತಾಗಿ ಪ್ರಶಿಕ್ಷಣಾರ್ಥಿಗಳು ಸಮೂಹ ಗಾಯನವನ್ನು ಹಾಡಿದರು ಹಾಗೂ ಪ್ರಶಿಕ್ಷಣಾರ್ಥಿ ಜಾಸ್ಮಿನ್ ರೇಶ್ಮಾ ಕ್ರಾಸ್ತ ಸ್ವರಚಿತ ಕವನವನ್ನು ವಾಚಿಸಿದರು. ಕಾಲೇಜಿನ ಉಪನ್ಯಾಸಕ ವೃಂದದವರಿಗೆ ಮನರಂಜನಾ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ವಿದ್ಯಾಶ್ರೀ ಪಿ, ಅನುಷಾ ಡಿ ಜೆ, ಚೈತ್ರ ಹಾಗೂ ಬೋಧಕೇತರ ಸಿಬ್ಬಂದಿ ವಂದನಾ ಮತ್ತು ಪ್ರಥಮ ಹಾಗೂ ದ್ವಿತೀಯ ಬಿ.ಎಡ್. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಪ್ರಶಿಕ್ಷಣಾರ್ಥಿಗಳಾದ ತೇಜಸ್ವಿನಿ ಸ್ವಾಗತಿಸಿ, ಕಿರಣ್ ಧನ್ಯವಾದವಿತ್ತರು. ಕೀರ್ತನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಇಂದಬೆಟ್ಟು: ಕಲ್ಲಾಜೆ ನವಭಾರತ್ ಗೆಳೆಯರ ಬಳಗದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya
error: Content is protected !!