23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

ಬೆಳ್ತಂಗಡಿ: ಉಪ ವಲಯ ಅರಣ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಉಪ್ಪಿನಂಗಡಿ ವಲಯದ ಪ್ರಶಾಂತ್ ಹಾಗೂ ಕು. ಕಮಲರವರು ಅರಣ್ಯ ರಕ್ಷಣೆ, ಒತ್ತುವರಿ ತೆರವು ಕಾರ್ಯಗಳಲ್ಲಿ ಅಮೋಘ ಸಾಧನೆ ಮಾಡಿರುವುದಕ್ಕೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದು ಇವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮುಖ್ಯಮಂತ್ರಿ ಪದಕವನ್ನು ಹಸ್ತಾಂತರಿಸಿ ಅಭಿನಂದಿಸಿ ಶುಭ ಹಾರೈಸಿದರು.

ಪ್ರಶಾಂತ್‌ರವರು ಬೈಂದೂರು ಗ್ರಾಮದ ಮರವಂತೆ ನಿವಾಸಿಯಾಗಿದ್ದು 2008ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯಕ್ಕೆ ಸೇರಿದ್ದರು. 2010ರಲ್ಲಿ ಅರಣ್ಯ ಇಲಾಖೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕಲಬುರ್ಗಿ ಜಿಲ್ಲೆಯ ಜೇವರ್ಗಿ ಸಾಮಾಜಿಕ ಅರಣ್ಯ ವಲಯಕ್ಕೆ ನೇಮಕಗೊಂಡು ನಂತರ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ವನ್ಯಜೀವಿ ನಿಲಯ, ಮೂಡಬಿದ್ರೆ ವಲಯದಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. 2015, ಡಿಸೆಂಬರ್‌ನಲ್ಲಿ ಉಪ್ಪಿನಂಗಡಿ ವಲಯದ ಕಳೆಂಜ ಶಾಖೆಗೆ ವರ್ಗಾವಣೆಗೊಂಡು ಸತತ 8 ವರ್ಷ ಕರ್ತವ್ಯ ನಿರ್ವಹಿಸಿ, 2024ರ ಜುಲೈ 11 ರಂದು ವರ್ಗಾವಣೆಗೊಂಡು ಪ್ರಸ್ತುತ ಮಂಗಳೂರು ಅರಣ್ಯ ಸಂಚಾರಿ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕು.ಕಮಲರವರು ಮೂಲತಃ ಉಜಿರೆ ನಿವಾಸಿ 2005ರಲ್ಲಿ ನೇರ ನೇಮಕಾತಿ ಮೂಲಕ ಬೆಳ್ತಂಗಡಿ ವಲಯದ ಅರಣ್ಯ ವೀಕ್ಷಕರಾಗಿ ನೇಮಕಗೊಂಡು ಬಳಿಕ ಅರಣ್ಯ ರಕ್ಷಕರಾಗಿ ಪದೋನ್ನತಿಗೊಂಡು ಬೆಳ್ತಂಗಡಿ ವಲಯದ ಚಿಬಿದ್ರಿ ತೋಟತ್ತಡಿ, ನೆರಿಯಾ, ಪುದುವೆಟ್ಟು ಇಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2020ರಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಪದೋನ್ನತಿ ಹೊಂದಿ ಉಪ್ಪಿನಂಗಡಿ ವಲಯದ ಶಿಬಾಜೆ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಅಲ್ಲಿಂದ ಮಂಗಳೂರಿನ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕಛೇರಿಗೆ ವರ್ಗಾವಣೆಗೊಂಡರು. ಪ್ರಸ್ತುತ ಕಮಲರವರು ವಿಶೇಷ ಕರ್ತವ್ಯ ನಿಮಿತ್ತ ಬೆಳ್ತಂಗಡಿ ವಲಯಕ್ಕೆ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related posts

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya
error: Content is protected !!