July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

ಕಳಿಯ : ಗ್ರಾಮ ಪಂಚಾಯಿತಿ ಕಳಿಯ ಮತ್ತು ಪಶುಸಂಗೋಪನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರವು ಸೆ. 5 ರಂದು ಕಳಿಯ ಗ್ರಾಮ ಪಂಚಾಯಿತಿ ವಠಾರದಲ್ಲಿ ಜರಗಿತು.


ಲಸಿಕ ಶಿಬಿರವನ್ನು ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷ ದಿವಾಕರ ಎಂ ಚಾಲನೆ ನೀಡಿ ಮಾತಾನಾಡಿ ರೇಬಿಸ್ ರೋಗದ ನಿರ್ಮೂಲನೆಗೆ ಪಂಚಾಯತ್ ಕಡೆಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆಂದು ಭರವಸೆ ನೀಡಿದರು.

ಈ ವೇಳೆ ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇದರ ಸಹಾಯಕ ನಿರ್ದೇಶಕರಾದ ಡಾ. ರವಿಕುಮಾರ್ ರವರು ಈ ಶಿಬಿರದ ಬಗ್ಗೆ ಮಾಹಿತಿ ನೀಡುತ್ತಾ ಕೇಂದ್ರ ಸರ್ಕಾರದ ಯೋಜನೆಯಂತೆ 2030 ಅವಧಿಗೆ ರೇಬಿಸ್ ರೋಗ ಸಂಪೂರ್ಣ ನಿರ್ಮೂಲನಾ ಬಹುದೊಡ್ಡ ಕನಸಾಗಿದ್ದು ಇದನ್ನು ನನಸುಗೊಳಿಸಬೇಕಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಅದ್ಯಕ್ಷರಾದ ಶ್ರೀಮತಿ ಸುಭಾಷಿಣಿ ಕೆ , ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಹಾಗೂ ಸ್ಥಳಿಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇಲ್ಲಿಯ ಸಿಬ್ಬಂದಿಗಳಾದ ರಂಗನಾಥ್ ಸಿ ಆರ್ ಮತ್ತು ಚಂದ್ರಕುಮಾರ್ , ಕಳಿಯ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ, ರವಿ ಹೆಚ್, ಸುರೇಶ್ ಕುಮಾರ್ ,ಸುಚಿತ್ರಾ, ಶಶಿಕಲಾ , ನಂದಿನಿ, ಮಾನಸ, ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಶುಸಖಿಯಾದ ಕೆ ರೂಪ ಸಹಕರಿಸಿದರು.

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೈದ್ಯರ 2 ತಂಡಗಳನ್ನು ರಚಿಸಿ ಸುಮಾರು 17 ಕ್ಕೂ ಹೆಚ್ಚಿನ ಕಡೆ ಸುಮಾರು 20೦ ಕ್ಕೂ ಹೆಚ್ಚು ಸಾಕು ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆಯನ್ನು ಉಚಿತವಾಗಿ ಹಾಕಿಸಿ ಕೊಂಡರು.

ಪಂಚಾಯತ್ ಕಾರ್ಯದರ್ಶಿಯವರಾದ ಕುಂಞ ಕೆ ಇವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya
error: Content is protected !!