ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

ಕಳಿಯ : ಗ್ರಾಮ ಪಂಚಾಯಿತಿ ಕಳಿಯ ಮತ್ತು ಪಶುಸಂಗೋಪನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರವು ಸೆ. 5 ರಂದು ಕಳಿಯ ಗ್ರಾಮ ಪಂಚಾಯಿತಿ ವಠಾರದಲ್ಲಿ ಜರಗಿತು.


ಲಸಿಕ ಶಿಬಿರವನ್ನು ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷ ದಿವಾಕರ ಎಂ ಚಾಲನೆ ನೀಡಿ ಮಾತಾನಾಡಿ ರೇಬಿಸ್ ರೋಗದ ನಿರ್ಮೂಲನೆಗೆ ಪಂಚಾಯತ್ ಕಡೆಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆಂದು ಭರವಸೆ ನೀಡಿದರು.

ಈ ವೇಳೆ ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇದರ ಸಹಾಯಕ ನಿರ್ದೇಶಕರಾದ ಡಾ. ರವಿಕುಮಾರ್ ರವರು ಈ ಶಿಬಿರದ ಬಗ್ಗೆ ಮಾಹಿತಿ ನೀಡುತ್ತಾ ಕೇಂದ್ರ ಸರ್ಕಾರದ ಯೋಜನೆಯಂತೆ 2030 ಅವಧಿಗೆ ರೇಬಿಸ್ ರೋಗ ಸಂಪೂರ್ಣ ನಿರ್ಮೂಲನಾ ಬಹುದೊಡ್ಡ ಕನಸಾಗಿದ್ದು ಇದನ್ನು ನನಸುಗೊಳಿಸಬೇಕಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಅದ್ಯಕ್ಷರಾದ ಶ್ರೀಮತಿ ಸುಭಾಷಿಣಿ ಕೆ , ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಹಾಗೂ ಸ್ಥಳಿಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇಲ್ಲಿಯ ಸಿಬ್ಬಂದಿಗಳಾದ ರಂಗನಾಥ್ ಸಿ ಆರ್ ಮತ್ತು ಚಂದ್ರಕುಮಾರ್ , ಕಳಿಯ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ, ರವಿ ಹೆಚ್, ಸುರೇಶ್ ಕುಮಾರ್ ,ಸುಚಿತ್ರಾ, ಶಶಿಕಲಾ , ನಂದಿನಿ, ಮಾನಸ, ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಶುಸಖಿಯಾದ ಕೆ ರೂಪ ಸಹಕರಿಸಿದರು.

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೈದ್ಯರ 2 ತಂಡಗಳನ್ನು ರಚಿಸಿ ಸುಮಾರು 17 ಕ್ಕೂ ಹೆಚ್ಚಿನ ಕಡೆ ಸುಮಾರು 20೦ ಕ್ಕೂ ಹೆಚ್ಚು ಸಾಕು ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆಯನ್ನು ಉಚಿತವಾಗಿ ಹಾಕಿಸಿ ಕೊಂಡರು.

ಪಂಚಾಯತ್ ಕಾರ್ಯದರ್ಶಿಯವರಾದ ಕುಂಞ ಕೆ ಇವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

Suddi Udaya

ಕೊಕ್ಕಡ: ವಿದ್ಯಾರ್ಥಿನಿ ಹಾಗೂ ಬೈಕ್ ನಲ್ಲಿ ತೆರಳುತ್ತಿದ್ದವರನ್ನು ಬೆನ್ನಟ್ಟಿದ ಕಾಡಾನೆ: ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಗಸ್ತು

Suddi Udaya
error: Content is protected !!