23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ನಡ: ಮಂಜೊಟ್ಟಿ ಪಣಿಕ್ಕಲ ನಿವಾಸಿಯಾದ ಧರ್ಣಪ್ಪ ಪೂಜಾರಿ(55 ವರ್ಷ) ಇವರು ಸೆ.4ರಂದು ಸಂಜೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಡ ಗ್ರಾಮದ ಪಣಿಕ್ಕಲ ನಿವಾಸಿ ಲಲಿತ ರವರ ದೂರಿನಂತೆ ಲಲಿತ ರವರ ಪತಿ ದರ್ಣಪ್ಪ ಪೂಜಾರಿ ರವರು ಮದುವೆಯಾಗಿ 28 ವರ್ಷಗಳಾಗಿದ್ದು ಮಕ್ಕಳಾಗಿರುವುದಿಲ್ಲ ಇದೇ ವಿಚಾರದಲ್ಲಿ ಲಲಿತ ಪತಿ ಧರ್ಣಪ್ಪ ಪೂಜಾರಿ ರವರು ಮಾನಸಿಕವಾಗಿ ಮನನೊಂದು ಮಾನಸಿಕ ಖಾಯಿಲೆಗೆ ತುತ್ತಾಗಿದ್ದವರು ಸುಮಾರು 10 ವರ್ಷಗಳಿಂದ ಮಾನಸಿಕ ತಜ್ಞರಿಂದ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದವರು ಸುಮಾರು 5 ತಿಂಗಳಿನಿಂದ ಯಾವುದೇ ಕೆಲಸಕ್ಕೂ ಹೋಗದೆ ಮನೆಯಲ್ಲಿಯೇ ಇದ್ದುದಾಗಿರುತ್ತದೆ. ಹೀಗಿರುವಾಗ ಸೆ.04 ರಂದು ಲಲಿತ ರವರು ಸಂಜೆ 4.30 ಗಂಟೆಗೆ ಮಂಜೊಟ್ಟಿ ಹಾಲಿನ ಡಿಪೊಗೆ ಹೋಗಿದ್ದು ಸಂಜೆ 5.30 ಗಂಟೆಗೆ ಮನೆಗೆ ವಾಪಾಸ್ಸು ಬಂದು ನೋಡಿದಾಗ ಲಲಿತ ಗಂಡ ಮನೆಯ ಛಾವಡಿಗೆ ಹಾಕಿದ ಮರದ ಅಡ್ಡಕ್ಕೆ ನೇಣು ಬಿಗಿದುಕೊಂಡಿರುವುದನ್ನು ಕಂಡು ನೆರೆ ಮನೆಯ ಲಲಿತ ರವರ ಅಣ್ಣ ಉಮೇಶ್ ಎಂಬಾತನನ್ನು ಬರಮಾಡಿಕೊಂಡು ಕುತ್ತಿಗೆಗೆ ಬಿಗಿದುಕೊಂಡಿದ್ದ ಬೈರಾಸ್ ನ್ನು ತುಂಡು ಮಾಡಿ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಲ್ಲಿ ಆಸ್ಪತ್ರೆಯ ವೈಧ್ಯಾಧಿಕಾರಿಯವರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅಪರಾದ 38/2024 ಕಲಂ: 194 ಬಿಎನ್ ಎಸ್ ಎಸ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಗಾಯಗೊಂಡ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಪಡಂಗಡಿ ಹದಗೆಟ್ಟ ರಸ್ತೆ: ಕೂಡಲೇ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ

Suddi Udaya
error: Content is protected !!