July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ನಡ: ಮಂಜೊಟ್ಟಿ ಪಣಿಕ್ಕಲ ನಿವಾಸಿಯಾದ ಧರ್ಣಪ್ಪ ಪೂಜಾರಿ(55 ವರ್ಷ) ಇವರು ಸೆ.4ರಂದು ಸಂಜೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಡ ಗ್ರಾಮದ ಪಣಿಕ್ಕಲ ನಿವಾಸಿ ಲಲಿತ ರವರ ದೂರಿನಂತೆ ಲಲಿತ ರವರ ಪತಿ ದರ್ಣಪ್ಪ ಪೂಜಾರಿ ರವರು ಮದುವೆಯಾಗಿ 28 ವರ್ಷಗಳಾಗಿದ್ದು ಮಕ್ಕಳಾಗಿರುವುದಿಲ್ಲ ಇದೇ ವಿಚಾರದಲ್ಲಿ ಲಲಿತ ಪತಿ ಧರ್ಣಪ್ಪ ಪೂಜಾರಿ ರವರು ಮಾನಸಿಕವಾಗಿ ಮನನೊಂದು ಮಾನಸಿಕ ಖಾಯಿಲೆಗೆ ತುತ್ತಾಗಿದ್ದವರು ಸುಮಾರು 10 ವರ್ಷಗಳಿಂದ ಮಾನಸಿಕ ತಜ್ಞರಿಂದ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದವರು ಸುಮಾರು 5 ತಿಂಗಳಿನಿಂದ ಯಾವುದೇ ಕೆಲಸಕ್ಕೂ ಹೋಗದೆ ಮನೆಯಲ್ಲಿಯೇ ಇದ್ದುದಾಗಿರುತ್ತದೆ. ಹೀಗಿರುವಾಗ ಸೆ.04 ರಂದು ಲಲಿತ ರವರು ಸಂಜೆ 4.30 ಗಂಟೆಗೆ ಮಂಜೊಟ್ಟಿ ಹಾಲಿನ ಡಿಪೊಗೆ ಹೋಗಿದ್ದು ಸಂಜೆ 5.30 ಗಂಟೆಗೆ ಮನೆಗೆ ವಾಪಾಸ್ಸು ಬಂದು ನೋಡಿದಾಗ ಲಲಿತ ಗಂಡ ಮನೆಯ ಛಾವಡಿಗೆ ಹಾಕಿದ ಮರದ ಅಡ್ಡಕ್ಕೆ ನೇಣು ಬಿಗಿದುಕೊಂಡಿರುವುದನ್ನು ಕಂಡು ನೆರೆ ಮನೆಯ ಲಲಿತ ರವರ ಅಣ್ಣ ಉಮೇಶ್ ಎಂಬಾತನನ್ನು ಬರಮಾಡಿಕೊಂಡು ಕುತ್ತಿಗೆಗೆ ಬಿಗಿದುಕೊಂಡಿದ್ದ ಬೈರಾಸ್ ನ್ನು ತುಂಡು ಮಾಡಿ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಲ್ಲಿ ಆಸ್ಪತ್ರೆಯ ವೈಧ್ಯಾಧಿಕಾರಿಯವರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅಪರಾದ 38/2024 ಕಲಂ: 194 ಬಿಎನ್ ಎಸ್ ಎಸ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya
error: Content is protected !!