July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

ಕಣಿಯೂರು: ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ(46ವ)ರವರು ಸೆ.4ರಂದು ಅನಾರೋಗ್ಯದಿಂದ ನಿಧನರಾಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪದ್ಮುಂಜ ದರ್ಖಾಸು ಮನೆ ಉಮೇಶ್ ರವರ ದೂರಿನಂತೆ ಉಮೇಶ್ ರವರ ಅಣ್ಣ ಕುಶಾಲಪ್ಪ (46) ರವರು ಸುಮಾರು 02 ವರ್ಷಗಳಿಂದ ಬಿ.ಪಿ ಶುಗರ್, ಅಸ್ತಮ ಖಾಯಿಲೆಯಿಂದ ಬಳಲುತ್ತಿದ್ದು ಇತೀಚೆಗೆ ಕೆಲಸಕ್ಕೆ ಹೋಗದೇ ಕಣಿಯೂರು ಗ್ರಾಮದ ಪದ್ಮುಂಜ ದರ್ಖಾಸು ಮನೆಯಲ್ಲಿ ಇದ್ದು, ಸುಮಾರು 03 ದಿನಗಳಿಂದ ಊಟ ಮಾಡಲು ಆಗದೇ ವಾಂತಿ ಮಾಡಿಕೊಂಡು ಮನೆಯಲ್ಲಿ ಇದ್ದವನು ಸೆ. 04. ರಂದು ಕುಶಾಲಪ್ಪನು ವಿಪರೀತ ಸುಸ್ತು ಅಗಿ ಯಾವುದೇ ಮಾತುಗಳನ್ನು ಆಡದೇ ಇದ್ದವನನ್ನು ಉಮೇಶ್ ಮತ್ತು ಕುಶಾಲಪ್ಪರವರ ಹೆಂಡತಿ ಉಷಾ ಹಾಗೂ ನೆರೆಮನೆಯವರಾದ ಕೊರಗಪ್ಪ ಎಂಬವರು ಅಂಬ್ಯುಲೆನ್ಸ್ ವಾಹನದಲ್ಲಿ ಬೆಳ್ತಂಗಡಿ ಸರಕಾರಿ ಅಸ್ಷತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಕುಶಾಲಪ್ಪನು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ, ಕುಶಾಲಪ್ಪನು ಸರಿಯಾಗಿ ಆಹಾರ ಸೇವನೆ ಮಾಡದೇ ಅಥವಾ ಬೇರೆ ಯಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಯುಡಿಆರ್ ನಂಬ್ರ: 32/2024 ಕಲಂ: 194 BNSS. ಯಂತೆ ಪ್ರಕರಣ ದಾಖಲಾಗಿರುತ್ತದೆ

Related posts

ಉಜಿರೆ ಎರ್ನೋಡಿ ನಿವಾಸಿ ಅಮ್ಮು ಮೊಗೇರ ನಿಧನ

Suddi Udaya

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya
error: Content is protected !!