July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಬಾರ ಮಂಡಳಿ (ಸ್ಪೈಸ್ ಬೋರ್ಡ್) ಮೂಡಿಗೆರೆ ವತಿಯಿಂದ ದ.ಕ.ಜಿಲ್ಲೆಯ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ಕುರಿತ ಒಂದು ದಿನದ ತರಬೇತಿ ಕಾರ್ಯಕ್ರಮವು ಸೆ.4 ರಂದು ನಡೆಯಿತು.

ತೋಟಗಾರಿಕೆ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಹರಿದಾಸ್ ಎಸ್. ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ಪ್ರಭಾರ ಜಂಟಿ ಕೃಷಿ ನಿರ್ದೇಶಕ ಶಿವಶಂಕರ್ ದಾನೆಗೊಂಡರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಾಂಬಾರ ಮಂಡಳಿಯ ಪ್ರಾದೇಶಿಕ ಕಚೇರಿ ಸಕಲೇಶಪುರ ಇಲ್ಲಿನ ಉಪ ನಿರ್ದೇಶಕ ಮಹಾಬಲೇಶ್ವರ ವೈ. ಹೊನ್ನೂರು ಇವರು ಭಾರತದಲ್ಲಿ ಸಾಂಬಾರ ಬೆಳೆಗಳ ರಫ್ತು ಮಾಡಲು ಇರುವ ಅವಕಾಶಗಳ ಕುರಿತು ವಿವರಿಸಿದರು. ಸಹಾಯಕ ಕೃಷಿ ನಿರ್ದೇಶಕರು ಬೆಳ್ತಂಗಡಿ ರಂಜಿತ್ ಕುಮಾರ್ ಟಿ.ಎಂ. ಇವರು ಕೃಷಿ ಇಲಾಖೆಯ ಪ್ರಮುಖ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಡಾ. ಹರ್ಷ ಕೆ ಎನ್, ವಿಜ್ಞಾನಿಗಳು, ಐಸಿಆರ್ ಐ, ದೋಣಿಗಲ್ ಸಕಲೇಶಪುರ ಇವರು ಕಾಳುಮೆಣಸಿನಲ್ಲಿ ಉತ್ತಮ ಕೃಷಿ ಪದ್ಧತಿಗಳು ಕುರಿತು ಮತ್ತು ಕುಮಾರ ಎಸ್, ಹಿರಿಯ ಕ್ಷೇತ್ರಾಧಿಕಾರಿ, ಸಾಂಬಾರ ಮಂಡಳಿಯ ಪ್ರಾದೇಶಿಕ ಕಚೇರಿ ಸಕಲೇಶಪುರ ಇವರು ಕಾಳುಮೆಣಸಿನ ನರ್ಸರಿ ವಿಧಾನಗಳ ಕುರಿತು ತರಬೇತಿಯನ್ನು ನೀಡಿದರು.

ಪ್ರಗತಿಪರ ಕೃಷಿಕ ಶ್ರೀ ಪ್ರಭಾಕರ ಮಯ್ಯ ಸುರ್ಯ ಇವರು ಕಾಳುಮೆಣಸಿನ ನಾಟಿ ಕುರಿತು ಪ್ರಾತ್ಯಕ್ಷಿಕೆ ಕೈಗೊಂಡರು. ಅಳದಂಗಡಿ ನಿವೃತ್ತ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸಂಜೀವ ನಾಯ್ಕ್ ಉಜಿರೆ, ನಿವೃತ್ತ ಸಹಾಯಕ ಕೃಷಿ ನಿರ್ದೇಶಕಿ ಶ್ರೀಮತಿ ಶೈಲಜಾ ಎ. ಎನ್, ಶ್ರೀಮತಿ ಸುಕನ್ಯಾ, ನಿರ್ದೇಶಕರು, ಅಳದಂಗಡಿ ಹೆಚ್.ಎಫ್.ಪಿ.ಸಿ ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ನಾರಾವಿ ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಬೆಂಚು ಡೆಸ್ಕ್ ವಿತರಣೆ

Suddi Udaya
error: Content is protected !!