ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

ಬೆಳಾಲು: ಬೆಳಾಲು ಗ್ರಾಮದ ಜಲಕ್ಕಾರು ನಿವಾಸಿ ಶೀನಪ್ಪ ಗೌಡ (65ವ) ರವರು ಬೆಳಾಲಿನ ಪೀನಾರಿ ಎಂಬಲ್ಲಿ ನಡೆದ ಬೈಕ್ ಅಪಘಾತದಲ್ಲಿ ಚಿಕಿತ್ಸೆ ಫಲಿಸದೆ ಸೆ.5ರಂದು ಸಾವನ್ನಪ್ಪಿದರು.

ಅವರು ಸೆ.4ರಂದು ಸಂಜೆ ಬೆಳಾಲಿನ ಹಾಲಿನ ಡೈರಿಗೆ ಹಾಲು ಹಾಕಿ ವಾಪಾಸು ಮನೆಗೆ ಬರುವ ವೇಳೆಗೆ ಪೀನಾರಿ ಎಂಬಲ್ಲಿ ಬೈಕ್ ಅಪಘಾತವಾಗಿ ಗಂಭೀರ ಗಾಯಗೊಂಡಿದ್ದರು. ಇವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ನಿಧನರಾದರು. ಇವರ ಬೈಕ್ ಸ್ಕಿಡ್ ಆಗಿ ಈ ಘಟನೆ ನಡೆಯಿತೊ, ಅಥವಾ ಬೊಲೇರೊ ಡಿಕ್ಕಿ ಹೊಡೆದು ಈ ಘಟನೆ ನಡೆಯಿತೊ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya

ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಖಾಸಗಿ ಬಸ್ಸು ನೌಕರರ ಸಂಘದವರಿಂದ ಆಯ್ದ ಭಾಗದಲ್ಲಿ ಶ್ರಮದಾನದ ಮೂಲಕ ದುರಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya
error: Content is protected !!