ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya

ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಕಳೆದೆರೆಡು ದಿನಗಳ ಹಿಂದೆ ಅಧಿಕೃತ ಭೇಟಿ ನಿಮಿತ್ತ ಬ್ರೂನೇ ದೇಶಕ್ಕೆ ಆಗಮಿಸಿದರು. ಇದು ಭಾರತೀಯ ಪ್ರಧಾನ ಮಂತ್ರಿಯಿಂದ ಬ್ರೂನೇ ದೇಶಕ್ಕೆ ನಡೆದಿರುವ ಮೊದಲ ದ್ವಿಪಕ್ಷೀಯ ಭೇಟಿ ಆಗಿದ್ದು, ಈ ಇತಿಹಾಸತ್ಮಾಕ ಭೇಟಿಯು ಭಾರತ ಮತ್ತು ಬ್ರೂನೇ ನಡುವಿನ ರಾಜತಾಂತ್ರಿಕ ಸಂಬಂಧಗಳ 40ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆಯುತ್ತಿದೆ.

ಪ್ರಧಾನಿ ನರೇಂದ್ರ ಮೋದಿಜೀಯವರ ಭೇಟಿಯ ಸಂದರ್ಭದಲ್ಲಿ ಬ್ರೂನೇ ದೇಶದಲ್ಲಿ ನೆಲೆಸಿರುವ ಭಾರತೀಯ ವಲಯದ ಜನರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಮೋದಿಜೀಯವರು ಬ್ರೂನೇ ದೇಶದಲ್ಲಿ ನೆಲೆಸಿರುವ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ತನುಶ್ರೀ ಕೋಡಿ ನಿವಾಸಿ ತೈಲ ಮತ್ತು ಅನಿಲ ಯಾಂತ್ರಿಕ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣವನ್ನು ಹಂಚಿಕೊಂಡರು.

Leave a Comment

error: Content is protected !!