25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ


ಬೆಳ್ತಂಗಡಿ: ವರ್ತಮಾನವನ್ನು ನಿರ್ದಿಷ್ಟವಾಗಿ ಬಳಸಿಕೊಳ್ಳುವುದರಿಂದ ಭವಿಷ್ಯವನ್ನು ಉತ್ತಮವಾಗಿಸಲು ಸಾಧ್ಯ ಎಂದು ಬೆಳಾಲು ಶ್ರೀ. ಧ. ಮಂ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯರಾದ ರಾಮಕೃಷ್ಣ ಭಟ್ ಹೇಳಿದರು.

ಅವರು ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಗೌರವ ಸನ್ಮಾನವನ್ನು ಸ್ವೀಕರಿಸಿ ಮಾತನಾಡುತ್ತಾ, ಜೀವನದಲ್ಲಿ ಒಳ್ಳೆಯದು ಘಟಿಸಲು ತುಂಬಾ ತಾಳ್ಮೆಯಿಂದ ಕಾಯಬೇಕಾಗುತ್ತದೆ. ಬದುಕುವ ದಾರಿಯಲ್ಲಿ ಅಡೆತಡೆಗಳಿರುವುದು ಸಹಜ. ಅದನ್ನೆಲ್ಲಾ ಪರಿಹರಿಸಿ ವ್ಯಕ್ತಿ ಶೀಲತೆ ಮತ್ತು ವೃತ್ತಿಶೀಲತೆಯನ್ನು ಪಡೆಯಲು ಗುರುಗಳು ಕಾರಣವಾಗುತ್ತಾರೆ. ನಮ್ಮೊಳಗೆ ಇರುವ ಗುರು ನಿರ್ದಿಷ್ಟ ಗುರಿಯನ್ನು ತಲುಪಿಸುತ್ತಾರೆ. ಶಿಕ್ಷಣವನ್ನು ಬದುಕಾಗಿಸುವುದರಲ್ಲಿ ಪ್ರತಿಯೊಬ್ಬರು ಸಫರಾಗಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಸುಧೀರ್ ಕೆ ಎನ್ ಶಿಕ್ಷಕರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಸನ್ಮಾನ ಪತ್ರ ವಾಚಿಸಿದರು. ವಿದ್ಯಾರ್ಥಿ ಕ್ಷೇಮಪಾನಾಧಿಕಾರಿ ಬೆಳಿಯಪ್ಪ. ಕೆ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಾತ್ವಿಕ್ ಸ್ವಾಗತಿಸಿದರು. ಕಾರ್ಯದರ್ಶಿ ಸಮನ್ವಿತ್ ವಂದಿಸಿದರು. ಅನುಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಕಾರ್ಯಗಾರ

Suddi Udaya

ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ ಅಮಾನವೀಯ : ಭಯೋತ್ಪಾದಕರನ್ನು ಈ ದೇಶದಿಂದ ಬೇರು ಸಮೇತ ಕಿತ್ತು ಹಾಕಬೇಕಿದೆ, ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

Suddi Udaya

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

Suddi Udaya

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya
error: Content is protected !!