22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ


ಬೆಳ್ತಂಗಡಿ: ವರ್ತಮಾನವನ್ನು ನಿರ್ದಿಷ್ಟವಾಗಿ ಬಳಸಿಕೊಳ್ಳುವುದರಿಂದ ಭವಿಷ್ಯವನ್ನು ಉತ್ತಮವಾಗಿಸಲು ಸಾಧ್ಯ ಎಂದು ಬೆಳಾಲು ಶ್ರೀ. ಧ. ಮಂ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯರಾದ ರಾಮಕೃಷ್ಣ ಭಟ್ ಹೇಳಿದರು.

ಅವರು ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಗೌರವ ಸನ್ಮಾನವನ್ನು ಸ್ವೀಕರಿಸಿ ಮಾತನಾಡುತ್ತಾ, ಜೀವನದಲ್ಲಿ ಒಳ್ಳೆಯದು ಘಟಿಸಲು ತುಂಬಾ ತಾಳ್ಮೆಯಿಂದ ಕಾಯಬೇಕಾಗುತ್ತದೆ. ಬದುಕುವ ದಾರಿಯಲ್ಲಿ ಅಡೆತಡೆಗಳಿರುವುದು ಸಹಜ. ಅದನ್ನೆಲ್ಲಾ ಪರಿಹರಿಸಿ ವ್ಯಕ್ತಿ ಶೀಲತೆ ಮತ್ತು ವೃತ್ತಿಶೀಲತೆಯನ್ನು ಪಡೆಯಲು ಗುರುಗಳು ಕಾರಣವಾಗುತ್ತಾರೆ. ನಮ್ಮೊಳಗೆ ಇರುವ ಗುರು ನಿರ್ದಿಷ್ಟ ಗುರಿಯನ್ನು ತಲುಪಿಸುತ್ತಾರೆ. ಶಿಕ್ಷಣವನ್ನು ಬದುಕಾಗಿಸುವುದರಲ್ಲಿ ಪ್ರತಿಯೊಬ್ಬರು ಸಫರಾಗಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಸುಧೀರ್ ಕೆ ಎನ್ ಶಿಕ್ಷಕರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಸನ್ಮಾನ ಪತ್ರ ವಾಚಿಸಿದರು. ವಿದ್ಯಾರ್ಥಿ ಕ್ಷೇಮಪಾನಾಧಿಕಾರಿ ಬೆಳಿಯಪ್ಪ. ಕೆ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಾತ್ವಿಕ್ ಸ್ವಾಗತಿಸಿದರು. ಕಾರ್ಯದರ್ಶಿ ಸಮನ್ವಿತ್ ವಂದಿಸಿದರು. ಅನುಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya
error: Content is protected !!