23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ


ಬೆಳ್ತಂಗಡಿ: ವರ್ತಮಾನವನ್ನು ನಿರ್ದಿಷ್ಟವಾಗಿ ಬಳಸಿಕೊಳ್ಳುವುದರಿಂದ ಭವಿಷ್ಯವನ್ನು ಉತ್ತಮವಾಗಿಸಲು ಸಾಧ್ಯ ಎಂದು ಬೆಳಾಲು ಶ್ರೀ. ಧ. ಮಂ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯರಾದ ರಾಮಕೃಷ್ಣ ಭಟ್ ಹೇಳಿದರು.

ಅವರು ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಗೌರವ ಸನ್ಮಾನವನ್ನು ಸ್ವೀಕರಿಸಿ ಮಾತನಾಡುತ್ತಾ, ಜೀವನದಲ್ಲಿ ಒಳ್ಳೆಯದು ಘಟಿಸಲು ತುಂಬಾ ತಾಳ್ಮೆಯಿಂದ ಕಾಯಬೇಕಾಗುತ್ತದೆ. ಬದುಕುವ ದಾರಿಯಲ್ಲಿ ಅಡೆತಡೆಗಳಿರುವುದು ಸಹಜ. ಅದನ್ನೆಲ್ಲಾ ಪರಿಹರಿಸಿ ವ್ಯಕ್ತಿ ಶೀಲತೆ ಮತ್ತು ವೃತ್ತಿಶೀಲತೆಯನ್ನು ಪಡೆಯಲು ಗುರುಗಳು ಕಾರಣವಾಗುತ್ತಾರೆ. ನಮ್ಮೊಳಗೆ ಇರುವ ಗುರು ನಿರ್ದಿಷ್ಟ ಗುರಿಯನ್ನು ತಲುಪಿಸುತ್ತಾರೆ. ಶಿಕ್ಷಣವನ್ನು ಬದುಕಾಗಿಸುವುದರಲ್ಲಿ ಪ್ರತಿಯೊಬ್ಬರು ಸಫರಾಗಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಸುಧೀರ್ ಕೆ ಎನ್ ಶಿಕ್ಷಕರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಸನ್ಮಾನ ಪತ್ರ ವಾಚಿಸಿದರು. ವಿದ್ಯಾರ್ಥಿ ಕ್ಷೇಮಪಾನಾಧಿಕಾರಿ ಬೆಳಿಯಪ್ಪ. ಕೆ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಾತ್ವಿಕ್ ಸ್ವಾಗತಿಸಿದರು. ಕಾರ್ಯದರ್ಶಿ ಸಮನ್ವಿತ್ ವಂದಿಸಿದರು. ಅನುಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya
error: Content is protected !!