23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಬಲಮುರಿ ಕ್ಷೇತ್ರ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ ಸೆ.9ರವರೆಗೆ ಲಾಯಿಲ ವಿಘ್ನೇಶ್ವರ ಕಲಾಮಂದಿರದಲ್ಲಿ ನಡೆಯಲಿದೆ.

ಸೆ.7ರಂದು ಬೆಳಿಗ್ಗೆ 108 ಕಾಯಿ ಗಣಪತಿ ಹವನ, ಪೂರ್ಣಾಹುತಿ, ಸಂಜೆ 5 ರಿಂದ ಶ್ರೀ ಶಾರದಾ ಅಂಧರ ಗೀತಗಾಯನ ಕಲಾ ಸಂಘ ಮಂಗಳೂರು ಇವರಿಂದ ಜನಪದ ಗೀತೆ ಹಾಗೂ ಭಕ್ತಿರಸಮಂಜರಿ, ರಾತ್ರಿ 8ರಿಂದ ಕರ್ನೋಡಿ ಮತ್ತು ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ, ಸೆ.8ರಂದು ಸಂಜೆ 6ರಿಂದ ಸಾಧನಾ ಕಲಾ ತಂಡ ಲಾಯಿಲ ಇವರಿಂದ “ಶ್ರೀ ಕೃಷ್ಣ ಪಾರಿಜಾತ ನರಕಾಸುರ ಮೋಕ್ಷ” ಯಕ್ಷಗಾನ, ರಾತ್ರಿ 9ರಿಂದ ಓಂ ಶಕ್ತಿ ಗೆಳೆಯರ ಬಳಗ ಲಾಯಿಲ ಇವರ ವತಿಯಿಂದ “ಬೈರಾಸ್ ಭಾಸ್ಕರೆ” ತುಳು ಹಾಸ್ಯಮಯ ನಾಟಕ ನಡೆಯಲಿದೆ.

ಸೆ.9ರಂದು ಮಧ್ಯಾಹ್ನ ಕರ್ನೋಡಿ, ಪಡ್ಲಾಡಿ, ಪುತ್ರಬೈಲು, ಹಂದೆವೂರು ಹಾಗೂ ಕನ್ನಾಜೆ ಅಂಗನವಾಡಿ ಮಕ್ಕಳಿಂದ ನೃತ್ಯ ಕಾರ್ಯಕ್ರಮ, ಸಂಜೆ ವಿವಿಧ ಭಜನಾ ತಂಡಗಳಿಂದ ಪ್ರತಿದಿನ ಭಜನಾ ಕಾರ್ಯಕ್ರಮ ಹಾಗೂ ಪ್ರತಿದಿನ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಜಾರ್ಜ್ ಕೆ.ಡಿ. ರವರ ಕರ್ತವ್ಯಕ್ಕೆ ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶ್ಲಾಘನೆ

Suddi Udaya

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!