25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

ಅರಸಿನಮಕ್ಕಿ : ಇಲ್ಲಿನ ಹೊಸ್ತೋಟದ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆಗೆ ಅರಸಿನಮಕ್ಕಿ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ಉನ್ನತ ಉದ್ಯೋಗದಲ್ಲಿರುವ ಮಿಥುನ್ ಕಾರಂತ್ರವರು ಸುಮಾರು 15 ಸಾವಿರ ರೂ. ವೆಚ್ಚದಲ್ಲಿ ಒದಗಿಸಿದ ಕ್ರೀಡಾ ಸಲಕರಣೆಗಳನ್ನು ಸೆ.6ರಂದು ಶಾಲೆಗೆ ಹಸ್ತಾಂತರಿಸಲಾಯಿತು.


ಮಿಥುನ್ ಕಾರಂತ್ರವರ ಹೆತ್ತವರಾದ ತಾ.ಪಂ. ಮಾಜಿ ಸದಸ್ಯರಾದ ಮಂಜುಳಾ ಕಾರಂತ್ – ರಾಜರಾಮ ಕಾರಂತ್ ದಂಪತಿ ಶಾಲೆಯ ಮುಖ್ಯೋಪಾಧ್ಯಾಯರಾದ ಮಾಲತಿಯವರಿಗೆ ಹಸ್ತಾಂತರಿಸಿದರು.


ನಂತರ ಮಾತನಾಡಿದ ಮಂಜುಳಾ ಕಾರಂತ್ರವರು ಗ್ರಾಮೀಣ ಶಾಲೆಯಾದರೂ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸವನ್ನು ನೀಡಿ ಸರ್ವಾಂಗೀಣ ಬೆಳವಣಿಗೆಗೆ ಒತ್ತು ನೀಡಿರುವ ಹೊಸ್ತೋಟ ಶಾಲೆಗೆ ಕ್ರೀಡಾ ಸಾಮಾಗ್ರಿ ಒದಗಿಸಲು ಹರ್ಷವಾಗುತ್ತಿದೆ. ಮಕ್ಕಳು ಇದರ ಸದುಪಯೋಗಪಡಿಸಿಕೊಂಡು ಉತ್ತಮವಾಗಿ ಕಲಿತು ಶಾಲೆಗೆ ಕೀರ್ತಿ ತರಬೇಕೆಂದರು.


ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮುರಳೀಧರ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿ ಊರಿನ, ಶಾಲೆಯ ಬಗ್ಗೆ ಅಭಿಮಾನ ಹೊಂದಿ ಅಭಿವೃದ್ಧಿಗೆ ಕೈಜೋಡಿಸುವ ಮೂಲಕ ಮಿಥುನ್ರವರು ಮಾದರಿಯಾಗಿದ್ದಾರೆ ಎಂದರು. ಸಮಾರಂಭದಲ್ಲಿ ಹಳೆ ವಿದ್ಯಾಥರ್ಿ ಸಂಘದ ಅಧ್ಯಕ್ಷ ಶ್ರೀಕರ ಭಿಡೆ ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾಥರ್ಿ ಸಂಘದ ಗಣೇಶ್ ಹೊಸ್ತೋಟ, ಎಸ್ಡಿಎಂಸಿ ಸದಸ್ಯರಾದ ಗಣೇಶ್ ಪಲಸ್ತಡ್ಕ, ನೀತಾ ರಾಧೇಶ್, ವೃಷಾಂಕ್ ಖಾಡಿಲ್ಕರ್, ಅಂಗನವಾಡಿ ಕಾರ್ಯಕತರ್ೆ ಭಾರತಿ ಶೆಟ್ಟಿಗಾರ್ ಮೊದಲಾದವರು ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯರಾದ ಮಾಲತಿಯವರು ಸ್ವಾಗತಿಸಿ ಪ್ರಸ್ತಾವನೆಗೈದರು. ಸಹಶಿಕ್ಷಕಿ ಜಯಂತಿ ವಂದಿಸಿದರು.

Related posts

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!