23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

ಅರಸಿನಮಕ್ಕಿ : ಇಲ್ಲಿನ ಹೊಸ್ತೋಟದ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆಗೆ ಅರಸಿನಮಕ್ಕಿ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ಉನ್ನತ ಉದ್ಯೋಗದಲ್ಲಿರುವ ಮಿಥುನ್ ಕಾರಂತ್ರವರು ಸುಮಾರು 15 ಸಾವಿರ ರೂ. ವೆಚ್ಚದಲ್ಲಿ ಒದಗಿಸಿದ ಕ್ರೀಡಾ ಸಲಕರಣೆಗಳನ್ನು ಸೆ.6ರಂದು ಶಾಲೆಗೆ ಹಸ್ತಾಂತರಿಸಲಾಯಿತು.


ಮಿಥುನ್ ಕಾರಂತ್ರವರ ಹೆತ್ತವರಾದ ತಾ.ಪಂ. ಮಾಜಿ ಸದಸ್ಯರಾದ ಮಂಜುಳಾ ಕಾರಂತ್ – ರಾಜರಾಮ ಕಾರಂತ್ ದಂಪತಿ ಶಾಲೆಯ ಮುಖ್ಯೋಪಾಧ್ಯಾಯರಾದ ಮಾಲತಿಯವರಿಗೆ ಹಸ್ತಾಂತರಿಸಿದರು.


ನಂತರ ಮಾತನಾಡಿದ ಮಂಜುಳಾ ಕಾರಂತ್ರವರು ಗ್ರಾಮೀಣ ಶಾಲೆಯಾದರೂ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸವನ್ನು ನೀಡಿ ಸರ್ವಾಂಗೀಣ ಬೆಳವಣಿಗೆಗೆ ಒತ್ತು ನೀಡಿರುವ ಹೊಸ್ತೋಟ ಶಾಲೆಗೆ ಕ್ರೀಡಾ ಸಾಮಾಗ್ರಿ ಒದಗಿಸಲು ಹರ್ಷವಾಗುತ್ತಿದೆ. ಮಕ್ಕಳು ಇದರ ಸದುಪಯೋಗಪಡಿಸಿಕೊಂಡು ಉತ್ತಮವಾಗಿ ಕಲಿತು ಶಾಲೆಗೆ ಕೀರ್ತಿ ತರಬೇಕೆಂದರು.


ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮುರಳೀಧರ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿ ಊರಿನ, ಶಾಲೆಯ ಬಗ್ಗೆ ಅಭಿಮಾನ ಹೊಂದಿ ಅಭಿವೃದ್ಧಿಗೆ ಕೈಜೋಡಿಸುವ ಮೂಲಕ ಮಿಥುನ್ರವರು ಮಾದರಿಯಾಗಿದ್ದಾರೆ ಎಂದರು. ಸಮಾರಂಭದಲ್ಲಿ ಹಳೆ ವಿದ್ಯಾಥರ್ಿ ಸಂಘದ ಅಧ್ಯಕ್ಷ ಶ್ರೀಕರ ಭಿಡೆ ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾಥರ್ಿ ಸಂಘದ ಗಣೇಶ್ ಹೊಸ್ತೋಟ, ಎಸ್ಡಿಎಂಸಿ ಸದಸ್ಯರಾದ ಗಣೇಶ್ ಪಲಸ್ತಡ್ಕ, ನೀತಾ ರಾಧೇಶ್, ವೃಷಾಂಕ್ ಖಾಡಿಲ್ಕರ್, ಅಂಗನವಾಡಿ ಕಾರ್ಯಕತರ್ೆ ಭಾರತಿ ಶೆಟ್ಟಿಗಾರ್ ಮೊದಲಾದವರು ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯರಾದ ಮಾಲತಿಯವರು ಸ್ವಾಗತಿಸಿ ಪ್ರಸ್ತಾವನೆಗೈದರು. ಸಹಶಿಕ್ಷಕಿ ಜಯಂತಿ ವಂದಿಸಿದರು.

Related posts

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಉಜಿರೆ ಎರ್ನೋಡಿಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya
error: Content is protected !!