September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

ಅರಸಿನಮಕ್ಕಿ : ಇಲ್ಲಿನ ಹೊಸ್ತೋಟದ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆಗೆ ಅರಸಿನಮಕ್ಕಿ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ಉನ್ನತ ಉದ್ಯೋಗದಲ್ಲಿರುವ ಮಿಥುನ್ ಕಾರಂತ್ರವರು ಸುಮಾರು 15 ಸಾವಿರ ರೂ. ವೆಚ್ಚದಲ್ಲಿ ಒದಗಿಸಿದ ಕ್ರೀಡಾ ಸಲಕರಣೆಗಳನ್ನು ಸೆ.6ರಂದು ಶಾಲೆಗೆ ಹಸ್ತಾಂತರಿಸಲಾಯಿತು.


ಮಿಥುನ್ ಕಾರಂತ್ರವರ ಹೆತ್ತವರಾದ ತಾ.ಪಂ. ಮಾಜಿ ಸದಸ್ಯರಾದ ಮಂಜುಳಾ ಕಾರಂತ್ – ರಾಜರಾಮ ಕಾರಂತ್ ದಂಪತಿ ಶಾಲೆಯ ಮುಖ್ಯೋಪಾಧ್ಯಾಯರಾದ ಮಾಲತಿಯವರಿಗೆ ಹಸ್ತಾಂತರಿಸಿದರು.


ನಂತರ ಮಾತನಾಡಿದ ಮಂಜುಳಾ ಕಾರಂತ್ರವರು ಗ್ರಾಮೀಣ ಶಾಲೆಯಾದರೂ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸವನ್ನು ನೀಡಿ ಸರ್ವಾಂಗೀಣ ಬೆಳವಣಿಗೆಗೆ ಒತ್ತು ನೀಡಿರುವ ಹೊಸ್ತೋಟ ಶಾಲೆಗೆ ಕ್ರೀಡಾ ಸಾಮಾಗ್ರಿ ಒದಗಿಸಲು ಹರ್ಷವಾಗುತ್ತಿದೆ. ಮಕ್ಕಳು ಇದರ ಸದುಪಯೋಗಪಡಿಸಿಕೊಂಡು ಉತ್ತಮವಾಗಿ ಕಲಿತು ಶಾಲೆಗೆ ಕೀರ್ತಿ ತರಬೇಕೆಂದರು.


ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮುರಳೀಧರ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿ ಊರಿನ, ಶಾಲೆಯ ಬಗ್ಗೆ ಅಭಿಮಾನ ಹೊಂದಿ ಅಭಿವೃದ್ಧಿಗೆ ಕೈಜೋಡಿಸುವ ಮೂಲಕ ಮಿಥುನ್ರವರು ಮಾದರಿಯಾಗಿದ್ದಾರೆ ಎಂದರು. ಸಮಾರಂಭದಲ್ಲಿ ಹಳೆ ವಿದ್ಯಾಥರ್ಿ ಸಂಘದ ಅಧ್ಯಕ್ಷ ಶ್ರೀಕರ ಭಿಡೆ ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾಥರ್ಿ ಸಂಘದ ಗಣೇಶ್ ಹೊಸ್ತೋಟ, ಎಸ್ಡಿಎಂಸಿ ಸದಸ್ಯರಾದ ಗಣೇಶ್ ಪಲಸ್ತಡ್ಕ, ನೀತಾ ರಾಧೇಶ್, ವೃಷಾಂಕ್ ಖಾಡಿಲ್ಕರ್, ಅಂಗನವಾಡಿ ಕಾರ್ಯಕತರ್ೆ ಭಾರತಿ ಶೆಟ್ಟಿಗಾರ್ ಮೊದಲಾದವರು ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯರಾದ ಮಾಲತಿಯವರು ಸ್ವಾಗತಿಸಿ ಪ್ರಸ್ತಾವನೆಗೈದರು. ಸಹಶಿಕ್ಷಕಿ ಜಯಂತಿ ವಂದಿಸಿದರು.

Related posts

ಬೆಳ್ತಂಗಡಿ : ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್ & ಫರ್ನಿಚರ್‍ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಆಶ್ರಯದಲ್ಲಿ ನಾಳೆ(ಡಿ.29) ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya
error: Content is protected !!