July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ : ಉತ್ತಮ ಶಿಕ್ಷಕರ ಆಯ್ಕೆ ವಿಚಾರದಲ್ಲಿ ಸರಕಾರಕ್ಕೆ ಎಸ್‍ಡಿಪಿಐನವರು ದೂರು ಕೊಟ್ಟಿದ್ದಾರೆ ಎಂಬ ಕಾರಣಕ್ಕಾಗಿ ಉಡುಪಿ ಜಿಲ್ಲೆಯ ಕುಂದಾಪುರದ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರನ್ನು ಸರಕಾರದ ಅಧಿಕೃತ ಸಮಿತಿ ಆಯ್ಕೆ ಮಾಡಿ ಉತ್ತಮ ಶಿಕ್ಷಕ ಹೆಸರು ಪ್ರಕಟಿಸಿ ನಂತರ ತಡೆ ಹಿಡಿದದ್ದು ಎಷ್ಟು ಸರಿ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಯಾರನ್ನೋ ಓಲೈಕೆ ಮಾಡುವ ಕಾರಣಕ್ಕೆ ಪ್ರಶಸ್ತಿ ತಡೆಹಿಡಿಯುವ ಕ್ರಮ ಕೈಗೊಂಡಿದ್ದು ಸರಿಯಲ್ಲ. ಇದು ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ. ಹನುಮಾನ್ ಚಾಲೀಸಾ ವಿಚಾರದಲ್ಲೂ ಸರಕಾರ ಇದೇ ರೀತಿ ನಡಕೊಂಡಿತ್ತು. ಈ ರೀತಿಯ ನಡವಳಿಕೆ ಸಮಾಜದಲ್ಲಿ ಶಾಂತಿ ಕದಡುವ ವಾತಾವರಣ ಸೃಷ್ಟಿ ಮಾಡುತ್ತದೆ. ಗಣೇಶೋತ್ಸವ ಪ್ರಸಾದ ವಿತರಣೆ ಬಗ್ಗೆ ವಿಪರೀತ ನಿಯಮ ಮಾಡಿದ್ದೀರಿ. ಸರಕಾರ ಮಾಡುತ್ತಿರುವ ತಾರತಮ್ಯ ತುಷ್ಟಿಕರಣಕ್ಕೆ ಸಂವಿಧಾನ ಅನ್ವಯ ಆಗುದಿಲ್ಲವೇ?


ಇಂಥದ್ದಲ್ಲೆವನ್ನು ಮಾಡುತ್ತಿದ್ದರೆ ಈ ರಾಜ್ಯವನ್ನು ಕಾಪಾಡುವವರು ಯಾರು? ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಅಧಿಕಾರದ ಮದ ಏರಿದೆ. ಸಾಂವಿಧಾನಿಕ ವ್ಯವಸ್ಥೆ ಬಿಟ್ಟು ಏನೇ ಮಾಡಿದರೂ ಕೂಡ ಶಾಂತಿ ಕದಡುವ ವಾತಾವರಣ ಸೃಷ್ಟಿ ಆಗುತ್ತದೆ. ಅಂಥ ಕೆಲಸ ಮಾಡದಿರಿ. ತಪ್ಪುಗಳನ್ನು ಸರಿಪಡಿಸದೆ ಇದೇ ರೀತಿ ಮುಂದುವರಿದರೆ ಹೋರಾಟ ಅನಿವಾರ್ಯ ಎಂದು ನಾಯಕ್ ಅವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya
error: Content is protected !!