July 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಇವರ ನಿರ್ದೇಶನದಂತೆ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಸರಕಾರೀ ಪದವಿ ಪೂರ್ವ ಕಾಲೇಜು ನಡ ಇಲ್ಲಿ ನಡೆಯಿತು.

ಉದ್ಘಾಟನಾ ಸಮಾರಂಭದಲ್ಲಿ ಡಾll ಪ್ರದೀಪ್ ಕುಮಾರ್ ಅವರು ಮಾತನಾಡುತ್ತಾ “ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಸಮಚಿತ್ತದಿಂದ ಆಟವಾಡಬೇಕು.”ಎಂದು ಕಗ್ಗದ ಉಕ್ತಿಯೊಂದನ್ನು ವಿವರಿಸುತ್ತಾ ತಿಳಿಸಿದರು. ನಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ದಿವಾಕರ ಪೂಜಾರಿ ಇವರು ಅಧ್ಯಕ್ಷತೆ ವಹಿಸಿದ್ದರು.

ಮೋಹನ್ ಗೌಡ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಚಂದ್ರಶೇಖರ್ ಸ್ವಾಗತಿಸಿ ಶ್ರೀಮತಿ ಲಿಲ್ಲಿ ಪಿ.ವಿ. ವಂದಿಸಿದರು. ಸಮಾರೋಪ ಸಮಾರಂಭದಲ್ಲಿ ಅಜಿತ್ ಆರಿಗ ಇವರು ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ಶಿಲ್ಪಾ ಡಿ. ಸ್ವಾಗತಿಸಿ ಶ್ರೀಮತಿ ವಸಂತಿ ಪಿ. ನಿರೂಪಿಸಿ, ವಂದಿಸಿದರು.


ಬಾಲಕರ ವಿಭಾಗದಲ್ಲಿ ಎಸ್.ಡಿ.ಯಂ. ಪದವಿ ಪೂರ್ವ ಕಾಲೇಜು, ಉಜಿರೆ ಪ್ರಥಮ ಸ್ಥಾನವನ್ನು, ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ದ್ವಿತೀಯ ಸ್ಥಾನವನ್ನು ಪಡೆಯಿತು.


ಬಾಲಕಿಯರ ವಿಭಾಗದಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು, ಎಸ್. ಡಿ.ಯಂ. ಪದವಿ ಪೂರ್ವ ಕಾಲೇಜು, ಉಜಿರೆ ದ್ವಿತೀಯ ಸ್ಥಾನವನ್ನು ಪಡೆಯಿತು.

Related posts

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!