September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

ಪುದುವೆಟ್ಟು ಗ್ರಾಮದ ನಡ್ಯೇಲು ಎಂಬಲ್ಲಿ ಕಳೆದ ನಾಲ್ಕು ದಿನಗಳಿಂದ ಕಾಡಾನೆಯು ಓಡಾಡುತ್ತಿದ್ದು ಸೆ.5 ರಂದು ರಾತ್ರಿ ಕಾಡಾನೆಯು ಗದ್ದೆಗಳಿಗೆ ಹಾಗೂ ತೋಟಗಳಿಗೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ನಡೆದಿದೆ.

ಕಳೆದ ನಾಲ್ಕು ದಿನಗಳಿಂದ ಕಾಡಾನೆಯು ಪರಿಸರದಲ್ಲಿ ಓಡಾಡುತ್ತಿದ್ದು ಅಪಾರ ಕೃಷಿ ಹಾನಿ ಮಾಡಿದೆ. ನಡ್ಯೇಲು ನಾರಾಯಣ ಗೌಡ ರವರ ಗದ್ದೆಗೆ ನುಗ್ಗಿ ಭತ್ತದ ಗಿಡ, ತೆಂಗಿನ ಗಿಡಗಳು ಹಾಗೂ ಸುಂದರ ಗೌಡರವರ ತೋಟಕ್ಕೆ ನುಗ್ಗಿ ಬಾಳೆ ಗಿಡ, ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ.

ಸ್ಥಳಕ್ಕೆ ಪುದುವೆಟ್ಟು ಗ್ರಾ.ಪಂ ಅಧ್ಯಕ್ಷೆ ಅನಿತಾ, ಅರಣ್ಯ ಅಧಿಕಾರಿ ರವಿಚಂದ್ರನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅರಣ್ಯಾಧಿಕಾರಿ, ಇಂದು(ಸೆ.6) ರಾತ್ರಿ ನಾಲ್ವರು ಅರಣ್ಯ ಅಧಿಕಾರಿಗಳು, ಹಾಗೂ ಊರಿನ ಗ್ರಾಮಸ್ಥರು ಸೇರಿ ಆನೆಯನ್ನು ಕಾಡಿಗೆ ಬೆನ್ನಟ್ಟುವ ಬಗ್ಗೆ ತಿಳಿಸಿದರು.

Related posts

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya

ಬಿಜೆಪಿ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಆಯ್ಕೆ

Suddi Udaya

ಅಂಡಿOಜೆ … ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

Suddi Udaya

ಶಿರ್ಲಾಲು: ಗ್ರಾಮೀಣ ವಿದ್ಯಾರ್ಥಿಗಳ ಸಂಶೋಧನಾ ಮನೋಭಾವ ಬೆಳೆಸಿದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!