ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

ಕನ್ಯಾಡಿ: ಸೇವಾಭಾರತಿ ಕನ್ಯಾಡಿ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ ಉಡುಪಿ ಜಿಲ್ಲೆ ಇವುಗಳ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಕಾರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ 3 ದಿನಗಳ ಉಡುಪಿ ಜಿಲ್ಲಾ ಸಮಾವೇಶ – 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರದ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 4 ರಂದು ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಡಾ. ಉದಯಶಂಕರ ಎಚ್. ಜಿ ಆರ್ಥೋಪೆಡಿಕ್ ಸರ್ಜನ್, ಪ್ರಶಮನೀ ಆಸ್ಪತ್ರೆ, ಕೊಪ್ಪ ಇವರು ಮಾಡಿದಂತಹ ಸೇವಾ ಕಾರ್ಯಗಳನ್ನು ಗುರುತಿಸಿ, ಸೇವಾಭಾರತಿ ಸಂಸ್ಥೆಯ ವತಿಯಿಂದ “ಸೇವಾ ಶ್ರೇಷ್ಠ -2024” ಗೌರವವನ್ನು ನೀಡಿ ಸನ್ಮಾನಿಸಲಾಯಿತು.

ವೈದ್ಯಕೀಯ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು “ಸರ್ವ ರೋಗ ಪ್ರಶಮನೀ” ಆಸ್ಪತ್ರೆಯನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಪ್ರದೇಶದ ಜನರ ಜೀವನದಲ್ಲಿ ಆಶಾಕಿರಣವಾಗಿದ್ದಾರೆ. ಸೇವಾಭಾರತಿ ಸಂಸ್ಥೆಯ ಹಲವಾರು ಕಾರ್ಯಚಟುವಟಿಕೆಯಲ್ಲಿ ಕೈಜೋಡಿಸಿದ್ದು ಸಾಮಾಜಿಕ ಸೇವೆ, ಆರೋಗ್ಯ ಸೇವೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಮಾಡಿದ ಅನುಪಮ ಸಾಧನೆಯನ್ನು ಪರಿಗಣಿಸಿ ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೌತಡ್ಕದ ವತಿಯಿಂದ ಮನಪೂರ್ವಕವಾಗಿ ಅಭಿನಂದಿಸಿ “ಸೇವಾಶ್ರೇಷ್ಠ 2024” ಗೌರವಕ್ಕೆ ಭಾಜನರಾಗಿದ್ದಾರೆ.

Related posts

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Suddi Udaya

ಪಡಂಗಡಿ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!