25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ : ಉತ್ತಮ ಶಿಕ್ಷಕರ ಆಯ್ಕೆ ವಿಚಾರದಲ್ಲಿ ಸರಕಾರಕ್ಕೆ ಎಸ್‍ಡಿಪಿಐನವರು ದೂರು ಕೊಟ್ಟಿದ್ದಾರೆ ಎಂಬ ಕಾರಣಕ್ಕಾಗಿ ಉಡುಪಿ ಜಿಲ್ಲೆಯ ಕುಂದಾಪುರದ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರನ್ನು ಸರಕಾರದ ಅಧಿಕೃತ ಸಮಿತಿ ಆಯ್ಕೆ ಮಾಡಿ ಉತ್ತಮ ಶಿಕ್ಷಕ ಹೆಸರು ಪ್ರಕಟಿಸಿ ನಂತರ ತಡೆ ಹಿಡಿದದ್ದು ಎಷ್ಟು ಸರಿ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಯಾರನ್ನೋ ಓಲೈಕೆ ಮಾಡುವ ಕಾರಣಕ್ಕೆ ಪ್ರಶಸ್ತಿ ತಡೆಹಿಡಿಯುವ ಕ್ರಮ ಕೈಗೊಂಡಿದ್ದು ಸರಿಯಲ್ಲ. ಇದು ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ. ಹನುಮಾನ್ ಚಾಲೀಸಾ ವಿಚಾರದಲ್ಲೂ ಸರಕಾರ ಇದೇ ರೀತಿ ನಡಕೊಂಡಿತ್ತು. ಈ ರೀತಿಯ ನಡವಳಿಕೆ ಸಮಾಜದಲ್ಲಿ ಶಾಂತಿ ಕದಡುವ ವಾತಾವರಣ ಸೃಷ್ಟಿ ಮಾಡುತ್ತದೆ. ಗಣೇಶೋತ್ಸವ ಪ್ರಸಾದ ವಿತರಣೆ ಬಗ್ಗೆ ವಿಪರೀತ ನಿಯಮ ಮಾಡಿದ್ದೀರಿ. ಸರಕಾರ ಮಾಡುತ್ತಿರುವ ತಾರತಮ್ಯ ತುಷ್ಟಿಕರಣಕ್ಕೆ ಸಂವಿಧಾನ ಅನ್ವಯ ಆಗುದಿಲ್ಲವೇ?


ಇಂಥದ್ದಲ್ಲೆವನ್ನು ಮಾಡುತ್ತಿದ್ದರೆ ಈ ರಾಜ್ಯವನ್ನು ಕಾಪಾಡುವವರು ಯಾರು? ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಅಧಿಕಾರದ ಮದ ಏರಿದೆ. ಸಾಂವಿಧಾನಿಕ ವ್ಯವಸ್ಥೆ ಬಿಟ್ಟು ಏನೇ ಮಾಡಿದರೂ ಕೂಡ ಶಾಂತಿ ಕದಡುವ ವಾತಾವರಣ ಸೃಷ್ಟಿ ಆಗುತ್ತದೆ. ಅಂಥ ಕೆಲಸ ಮಾಡದಿರಿ. ತಪ್ಪುಗಳನ್ನು ಸರಿಪಡಿಸದೆ ಇದೇ ರೀತಿ ಮುಂದುವರಿದರೆ ಹೋರಾಟ ಅನಿವಾರ್ಯ ಎಂದು ನಾಯಕ್ ಅವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

Related posts

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಾರ್ಷಿಕ ಕ್ರೀಡಾ ಕೂಟ

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!