23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಶೃಂಗಸಭೆ ಕಾರ್ಯಕ್ರಮವು ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಫಲಾಹ್ ಸಭಾಭವನದಲ್ಲಿ ಸೆ.6ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಝ್ ಫರಂಗಿಪೇಟೆ, ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಪೋನ್ಸ್ ಫ್ರಾಂಕೊ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಇನಾಸ್ ರೋಡ್ರಿಗಸ್ ಆಗಮಿಸಿದ್ದರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಪ್ರಸ್ತಾವಿಕ ಮಾತನಾಡಿದರು. ಇನಾಸ್ ರೋಡ್ರಿಗಸ್ ಹಾಗೂ ಅಲ್ಪೋನ್ಸ್ ಫ್ರಾಂಕೊ ಅತಿಥಿ ಭಾಷಣ ಮಾಡಿದರು. ಸಭೆಯನ್ನು ಉದ್ದೇಶಿಸಿ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರುರವರು ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಪಕ್ಷದ ಕಾರ್ಯಕರ್ತರುಗಳು ಮತ್ತು ಸ್ಥಳೀಯ ನಾಯಕರುಗಳ ಸಂಘಟಿತ ಚಟುವಟಿಕೆಗಳು ಮತ್ತು ಮುಂದಿನ ದಿನಗಳಲ್ಲಿ ತಳಮಟ್ಟದಲ್ಲಿ ಪಕ್ಷ ಬೆಳವಣಿಗೆ ನಡೆಸಿ ಉತ್ತಮ ನಾಯಕರನ್ನು ಸೃಷ್ಟಿ ಮಾಡಲು ಬೇಕಾಗಿರುವ ಅಂಶಗಳ ಕುರಿತು ಮಾತನಾಡಿದರು.

ಪರ್ಯಾಯ ರಾಜಕೀಯದ ಅನಿವಾರ್ಯತೆ ಮತ್ತು ನಮ್ಮ ಜವಾಬ್ದಾರಿ ಬಗ್ಗೆ ರಿಯಾಝ್ ಫರಂಗಿಪೇಟೆ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಜೊತೆ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಕೋಶಾಧಿಕಾರಿಗಳಾದ ಸ್ವಾಲಿ ಮದ್ದಡ್ಕ, ಹನೀಫ್ ಪುಂಜಾಲಕಟ್ಟೆ, ಸಹಲ್ ನಿರ್ಸಾಲ್, ಬ್ಲಾಕ್ ಸಮಿತಿ ಪದಾಧಿಕಾರಿಗಳು, ಬ್ರಾಂಚ್ ಸಮಿತಿ ಪದಾಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಸ್ವಾಗತಿಸಿ, ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ ಧನ್ಯವಾದಗೈದರು.

Related posts

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’: ಮೂರು ದಶಕಗಳ ವೃತ್ತಿ ಬದುಕಿಗೆ ಗೌರವದ ಬೀಳ್ಕೊಡುಗೆ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!