ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಇವರ ನಿರ್ದೇಶನದಂತೆ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಸರಕಾರೀ ಪದವಿ ಪೂರ್ವ ಕಾಲೇಜು ನಡ ಇಲ್ಲಿ ನಡೆಯಿತು.

ಉದ್ಘಾಟನಾ ಸಮಾರಂಭದಲ್ಲಿ ಡಾll ಪ್ರದೀಪ್ ಕುಮಾರ್ ಅವರು ಮಾತನಾಡುತ್ತಾ “ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಸಮಚಿತ್ತದಿಂದ ಆಟವಾಡಬೇಕು.”ಎಂದು ಕಗ್ಗದ ಉಕ್ತಿಯೊಂದನ್ನು ವಿವರಿಸುತ್ತಾ ತಿಳಿಸಿದರು. ನಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ದಿವಾಕರ ಪೂಜಾರಿ ಇವರು ಅಧ್ಯಕ್ಷತೆ ವಹಿಸಿದ್ದರು.

ಮೋಹನ್ ಗೌಡ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಚಂದ್ರಶೇಖರ್ ಸ್ವಾಗತಿಸಿ ಶ್ರೀಮತಿ ಲಿಲ್ಲಿ ಪಿ.ವಿ. ವಂದಿಸಿದರು. ಸಮಾರೋಪ ಸಮಾರಂಭದಲ್ಲಿ ಅಜಿತ್ ಆರಿಗ ಇವರು ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ಶಿಲ್ಪಾ ಡಿ. ಸ್ವಾಗತಿಸಿ ಶ್ರೀಮತಿ ವಸಂತಿ ಪಿ. ನಿರೂಪಿಸಿ, ವಂದಿಸಿದರು.


ಬಾಲಕರ ವಿಭಾಗದಲ್ಲಿ ಎಸ್.ಡಿ.ಯಂ. ಪದವಿ ಪೂರ್ವ ಕಾಲೇಜು, ಉಜಿರೆ ಪ್ರಥಮ ಸ್ಥಾನವನ್ನು, ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ದ್ವಿತೀಯ ಸ್ಥಾನವನ್ನು ಪಡೆಯಿತು.


ಬಾಲಕಿಯರ ವಿಭಾಗದಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು, ಎಸ್. ಡಿ.ಯಂ. ಪದವಿ ಪೂರ್ವ ಕಾಲೇಜು, ಉಜಿರೆ ದ್ವಿತೀಯ ಸ್ಥಾನವನ್ನು ಪಡೆಯಿತು.

Leave a Comment

error: Content is protected !!