23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

ಪುದುವೆಟ್ಟು ಗ್ರಾಮದ ನಡ್ಯೇಲು ಎಂಬಲ್ಲಿ ಕಳೆದ ನಾಲ್ಕು ದಿನಗಳಿಂದ ಕಾಡಾನೆಯು ಓಡಾಡುತ್ತಿದ್ದು ಸೆ.5 ರಂದು ರಾತ್ರಿ ಕಾಡಾನೆಯು ಗದ್ದೆಗಳಿಗೆ ಹಾಗೂ ತೋಟಗಳಿಗೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ನಡೆದಿದೆ.

ಕಳೆದ ನಾಲ್ಕು ದಿನಗಳಿಂದ ಕಾಡಾನೆಯು ಪರಿಸರದಲ್ಲಿ ಓಡಾಡುತ್ತಿದ್ದು ಅಪಾರ ಕೃಷಿ ಹಾನಿ ಮಾಡಿದೆ. ನಡ್ಯೇಲು ನಾರಾಯಣ ಗೌಡ ರವರ ಗದ್ದೆಗೆ ನುಗ್ಗಿ ಭತ್ತದ ಗಿಡ, ತೆಂಗಿನ ಗಿಡಗಳು ಹಾಗೂ ಸುಂದರ ಗೌಡರವರ ತೋಟಕ್ಕೆ ನುಗ್ಗಿ ಬಾಳೆ ಗಿಡ, ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ.

ಸ್ಥಳಕ್ಕೆ ಪುದುವೆಟ್ಟು ಗ್ರಾ.ಪಂ ಅಧ್ಯಕ್ಷೆ ಅನಿತಾ, ಅರಣ್ಯ ಅಧಿಕಾರಿ ರವಿಚಂದ್ರನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅರಣ್ಯಾಧಿಕಾರಿ, ಇಂದು(ಸೆ.6) ರಾತ್ರಿ ನಾಲ್ವರು ಅರಣ್ಯ ಅಧಿಕಾರಿಗಳು, ಹಾಗೂ ಊರಿನ ಗ್ರಾಮಸ್ಥರು ಸೇರಿ ಆನೆಯನ್ನು ಕಾಡಿಗೆ ಬೆನ್ನಟ್ಟುವ ಬಗ್ಗೆ ತಿಳಿಸಿದರು.

Related posts

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರ್: ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ಕಾರ್ಯಾಗಾರ, ಸಾಧಕರಿಗೆ ಸನ್ಮಾನ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

Suddi Udaya

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya
error: Content is protected !!