23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

ನಿಡ್ಲೆ: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ ಸಮಾರಂಭವು ಸೆ.8 ರಂದು ಸಂಘದ ಕೇಂದ್ರ ಕಛೇರಿ ವಠಾರದಲ್ಲಿ ಜರುಗಲಿದೆ.


ಕಾರ್ಯಕ್ರಮದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ರವರು ಸಂಘದ ನೂತನ ಕಛೇರಿ ಮತ್ತು ಗೋದಾಮು ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.


ಸಂಘದ ಭದ್ರತಾ ಕೊಠಡಿಯನ್ನು ಶಾಸಕ ಹರೀಶ್ ಪೂಂಜ, ಕ್ಯಾಂಪ್ಕೋ ಖರೀದಿ ಕೇಂದ್ರವನ್ನು ಮಂಗಳೂರು ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರ ನಾರಾಯಣ ಭಟ್ ಉದ್ಘಾಟಿಸಲಿದ್ದಾರೆ.
ಅಧ್ಯಕ್ಷತೆಯನ್ನು ನಿಡ್ಲೆ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ರಮೇಶ್ ರಾವ್ ಕೆ. ವಹಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್, ಮಂಗಳೂರು ಕೆ.ಎಂ.ಎಫ್. ಅಧ್ಯಕ್ಷೆ ಸುಚರಿತ ಶೆಟ್ಟಿ, ಜಿಲ್ಲಾ ಕೇಂದ್ರ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಬೆಳ್ತಂಗಡಿ ತಾ. ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಂಘ ಅಧ್ಯಕ್ಷ ಶ್ರೀಧರ ಭಿಡೆ, ದ.ಕ ಜಿ. ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಗಳೂರು ಕೆ.ಎಂ.ಎಫ್ ನಿರ್ದೇಶಕ ಪದ್ಮನಾಭ ಅರ್ಕಜೆ, ನಿಡ್ಲೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶ್ಯಾಮಲ, ಕಳೆಂಜ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಗಿರಿಜಾ, ಮಂಗಳೂರು ಸಹಕಾರ ಸಂಘದ ಉಪನಿಬಂಧಕ ರಮೇಶ್ ಹೆಚ್.ಎನ್., ಮಂಗಳೂರು ನಬಾರ್ಡ್ ಎ.ಜಿ.ಎಂ ಶ್ರೀಮತಿ ಸಂಗೀತಾ ಕರ್ತಾ, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ರಘು ಎಸ್.ಎಂ., ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಬಿ.ವಿ ಪ್ರತಿಮಾ ಭಾಗವಹಿಸಲಿದ್ದಾರೆ.


ಅಪರಾಹ್ನ ಗಂಟೆ 2.೦೦ ರಿಂದ ಕೃಷಿ ವಿಚಾರ ಸಂಕಿರಣ, ಹಾಗೂ ಸಂಜೆ ಗಂಟೆ 6.೦೦ರಿಂದ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ.


ಕೃಷಿಗೆ ಸಂಬಂಧಿಸಿದ ವಿವಿಧ ಪ್ರದರ್ಶನ ಮಳಿಗೆ ಪಾಲ್ಗೊಳ್ಳಲಿದ್ದು ಸದಸ್ಯರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕಾಗಿ ಸಂಘದ ಅಧ್ಯಕ್ಷ ರಮೇಶ್ ರಾವ್ ಕೆ. ತಿಳಿಸಿದ್ದಾರೆ.

Related posts

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya
error: Content is protected !!