23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ : ಉತ್ತಮ ಶಿಕ್ಷಕರ ಆಯ್ಕೆ ವಿಚಾರದಲ್ಲಿ ಸರಕಾರಕ್ಕೆ ಎಸ್‍ಡಿಪಿಐನವರು ದೂರು ಕೊಟ್ಟಿದ್ದಾರೆ ಎಂಬ ಕಾರಣಕ್ಕಾಗಿ ಉಡುಪಿ ಜಿಲ್ಲೆಯ ಕುಂದಾಪುರದ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರನ್ನು ಸರಕಾರದ ಅಧಿಕೃತ ಸಮಿತಿ ಆಯ್ಕೆ ಮಾಡಿ ಉತ್ತಮ ಶಿಕ್ಷಕ ಹೆಸರು ಪ್ರಕಟಿಸಿ ನಂತರ ತಡೆ ಹಿಡಿದದ್ದು ಎಷ್ಟು ಸರಿ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಯಾರನ್ನೋ ಓಲೈಕೆ ಮಾಡುವ ಕಾರಣಕ್ಕೆ ಪ್ರಶಸ್ತಿ ತಡೆಹಿಡಿಯುವ ಕ್ರಮ ಕೈಗೊಂಡಿದ್ದು ಸರಿಯಲ್ಲ. ಇದು ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ. ಹನುಮಾನ್ ಚಾಲೀಸಾ ವಿಚಾರದಲ್ಲೂ ಸರಕಾರ ಇದೇ ರೀತಿ ನಡಕೊಂಡಿತ್ತು. ಈ ರೀತಿಯ ನಡವಳಿಕೆ ಸಮಾಜದಲ್ಲಿ ಶಾಂತಿ ಕದಡುವ ವಾತಾವರಣ ಸೃಷ್ಟಿ ಮಾಡುತ್ತದೆ. ಗಣೇಶೋತ್ಸವ ಪ್ರಸಾದ ವಿತರಣೆ ಬಗ್ಗೆ ವಿಪರೀತ ನಿಯಮ ಮಾಡಿದ್ದೀರಿ. ಸರಕಾರ ಮಾಡುತ್ತಿರುವ ತಾರತಮ್ಯ ತುಷ್ಟಿಕರಣಕ್ಕೆ ಸಂವಿಧಾನ ಅನ್ವಯ ಆಗುದಿಲ್ಲವೇ?


ಇಂಥದ್ದಲ್ಲೆವನ್ನು ಮಾಡುತ್ತಿದ್ದರೆ ಈ ರಾಜ್ಯವನ್ನು ಕಾಪಾಡುವವರು ಯಾರು? ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಅಧಿಕಾರದ ಮದ ಏರಿದೆ. ಸಾಂವಿಧಾನಿಕ ವ್ಯವಸ್ಥೆ ಬಿಟ್ಟು ಏನೇ ಮಾಡಿದರೂ ಕೂಡ ಶಾಂತಿ ಕದಡುವ ವಾತಾವರಣ ಸೃಷ್ಟಿ ಆಗುತ್ತದೆ. ಅಂಥ ಕೆಲಸ ಮಾಡದಿರಿ. ತಪ್ಪುಗಳನ್ನು ಸರಿಪಡಿಸದೆ ಇದೇ ರೀತಿ ಮುಂದುವರಿದರೆ ಹೋರಾಟ ಅನಿವಾರ್ಯ ಎಂದು ನಾಯಕ್ ಅವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

Related posts

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya
error: Content is protected !!