July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ : ಉತ್ತಮ ಶಿಕ್ಷಕರ ಆಯ್ಕೆ ವಿಚಾರದಲ್ಲಿ ಸರಕಾರಕ್ಕೆ ಎಸ್‍ಡಿಪಿಐನವರು ದೂರು ಕೊಟ್ಟಿದ್ದಾರೆ ಎಂಬ ಕಾರಣಕ್ಕಾಗಿ ಉಡುಪಿ ಜಿಲ್ಲೆಯ ಕುಂದಾಪುರದ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರನ್ನು ಸರಕಾರದ ಅಧಿಕೃತ ಸಮಿತಿ ಆಯ್ಕೆ ಮಾಡಿ ಉತ್ತಮ ಶಿಕ್ಷಕ ಹೆಸರು ಪ್ರಕಟಿಸಿ ನಂತರ ತಡೆ ಹಿಡಿದದ್ದು ಎಷ್ಟು ಸರಿ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಯಾರನ್ನೋ ಓಲೈಕೆ ಮಾಡುವ ಕಾರಣಕ್ಕೆ ಪ್ರಶಸ್ತಿ ತಡೆಹಿಡಿಯುವ ಕ್ರಮ ಕೈಗೊಂಡಿದ್ದು ಸರಿಯಲ್ಲ. ಇದು ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ. ಹನುಮಾನ್ ಚಾಲೀಸಾ ವಿಚಾರದಲ್ಲೂ ಸರಕಾರ ಇದೇ ರೀತಿ ನಡಕೊಂಡಿತ್ತು. ಈ ರೀತಿಯ ನಡವಳಿಕೆ ಸಮಾಜದಲ್ಲಿ ಶಾಂತಿ ಕದಡುವ ವಾತಾವರಣ ಸೃಷ್ಟಿ ಮಾಡುತ್ತದೆ. ಗಣೇಶೋತ್ಸವ ಪ್ರಸಾದ ವಿತರಣೆ ಬಗ್ಗೆ ವಿಪರೀತ ನಿಯಮ ಮಾಡಿದ್ದೀರಿ. ಸರಕಾರ ಮಾಡುತ್ತಿರುವ ತಾರತಮ್ಯ ತುಷ್ಟಿಕರಣಕ್ಕೆ ಸಂವಿಧಾನ ಅನ್ವಯ ಆಗುದಿಲ್ಲವೇ?


ಇಂಥದ್ದಲ್ಲೆವನ್ನು ಮಾಡುತ್ತಿದ್ದರೆ ಈ ರಾಜ್ಯವನ್ನು ಕಾಪಾಡುವವರು ಯಾರು? ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಅಧಿಕಾರದ ಮದ ಏರಿದೆ. ಸಾಂವಿಧಾನಿಕ ವ್ಯವಸ್ಥೆ ಬಿಟ್ಟು ಏನೇ ಮಾಡಿದರೂ ಕೂಡ ಶಾಂತಿ ಕದಡುವ ವಾತಾವರಣ ಸೃಷ್ಟಿ ಆಗುತ್ತದೆ. ಅಂಥ ಕೆಲಸ ಮಾಡದಿರಿ. ತಪ್ಪುಗಳನ್ನು ಸರಿಪಡಿಸದೆ ಇದೇ ರೀತಿ ಮುಂದುವರಿದರೆ ಹೋರಾಟ ಅನಿವಾರ್ಯ ಎಂದು ನಾಯಕ್ ಅವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

Related posts

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya

ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya
error: Content is protected !!